ಮೂರನೇ ಶನಿವಾರ ಬ್ಯಾಗ್ ರಹಿತ ದಿನ
ಬೆಂಗಳೂರು: ಶಾಲಾ ಬ್ಯಾಗ್ ಹೊರೆ ಇಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದ್ದು, ಸದ್ಯದಲ್ಲೇ ಅಧಿಕೃತ ಆದೇಶವನ್ನು ಶಿಕ್ಷಣ ಇಲಾಖೆ ಹೊರಡಿಸಲಿದೆ ಎನ್ನಲಾಗಿದೆ.
ತಿಂಗಳ ಮೂರನೇ ಶನಿವಾರವನ್ನು ಬ್ಯಾಗ್ ರಹಿತ ದಿನವೆಂದು ಆಚರಿಸಬೇಕು ಎಂದು ಆದೇಶಿಸಲಿರುವ ಸರ್ಕಾರ, ಪಠ್ಯಪುಸ್ತಕ ಅಥವಾ ಇತರ ಪೂರಕ ಸಾಮಗ್ರಿಗಳ ಅವಶ್ಯಕತೆ ಇಲ್ಲದ ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿವಿದ್ಯಾರ್ಥಿಗಳನ್ನು ತೊಡಗಿಸುವ ನಿಟ್ಟಿನಲ್ಲಿ ಸಲಹಾತ್ಮಕ ಚಟುವಟಿಕೆಗಳ ಪಟ್ಟಿಯನ್ನು ನೀಡಲಿದೆ.
ಇನ್ನು 2019 ಎಪ್ರೀಲ್ 16 ರಂದು ನಡೆದಿದ್ದ ಸಭೆಯಲ್ಲಿ ಬ್ಯಾಗ್ ತೂಕ ವಿದ್ಯಾರ್ಥಿಯ ದೇಹದ ತೂಕದ ಶೇ 10 ನ್ನು ಮೀರದಂತಿರಬೇಕು ಅನ್ನೋ ತೀರ್ಮಾನಕ್ಕೆ ಬಂದಿತ್ತು ಎನ್ನಲಾಗಿದೆ. ಹೀಗಾಗಿ ಒಂದರಿಂದ ಎರಡನೇ ತರಗತಿ ಮಕ್ಕಳಿಗೆ 1.5ಕೆ.ಜಿ ಯಿಂದ 2 ಕೆ.ಜಿ , ಮೂರರಿಂದ ಐದನೇ ತರಗತಿ ಮಕ್ಕಳಿಗೆ- 2 ರಿಂದ 3 ಕೆ.ಜಿ, ಆರರಿಂದ ಎಂಟನೇ ತರಗತಿ ಮಕ್ಕಳಿಗೆ 3 ರಿಂದ 4 ಕೆ.ಜಿ, ಒಂಬತ್ತರಿಂದ ಹತ್ತನೇ ತರಗತಿ ಮಕ್ಕಳಿಗೆ 4 ರಿಂದ 5 ಕೆ.ಜಿ ತೂಕದ ಬ್ಯಾಗ ಇರಬೇಕು ಎನ್ನುವುದರ ಬಗ್ಗೆ ಸದ್ಯದಲ್ಲೇ ಸರ್ಕಾರ ಆದೇಶ ಹೊರಡಿಸಲಿದೆಯಂತೆ.
“ಕ್ಷೇತ್ರ ಸಂಚಾರ, ವಾರ್ತಾಪತ್ರಿಕೆಗಳ ಚಟುವಟಿಕೆಗಳು, ಗಣಿತದ ವಿನೋದ, ಅಬ್ಯಾಕಸ್ ಅಲ್ಲದೆ, ಶಾಲಾ ಬ್ಯಾಗ್ ಹೊರೆ ಇಳಿಸಲು ಶಾಲಾ ವಾತಾವರಣಕ್ಕೆ ಸೂಕ್ತವಾದ ಅಭ್ಯಾಸಗಳನ್ನು ಅಳವಡಿಸಬೇಕು,” ಎಂದು ಶಾಲಾಮುಖ್ಯಸ್ಥರಿಗೆ ಸೂಚಿಸಲಿದೆ.
ಅಷ್ಟೇ ಅಲ್ಲ. ವಿಜ್ಞಾನದ ಪ್ರಯೋಗ, ಪ್ರದರ್ಶನ, ಸಾಮಾನ್ಯ ಜ್ಞಾನ ಶೈಕ್ಷಣಿಕ ಸಂಘದ ಚಟುವಟಿಕೆಗಳು, ಮಣ್ಣಿನಲ್ಲಿ ವಸ್ತುಗಳ ತಯಾರಿಕೆ, ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳು ಸೇರಿದಂತೆ ಇನ್ನಿತರೆಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಿದೆ.
ಶಾಲಾ ಮಕ್ಕಳ ಬ್ಯಾಗಿನ ಹೊರೆ ಇಳಿಸುವ ವಿಚಾರದಲ್ಲಿ ಹಾಗೂ ಮಕ್ಕಳಿಗೆ ಹೋಂವರ್ಕ್ ಕೊಡುವ ವಿಚಾರದಲ್ಲಿಕೇಂದ್ರ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿತ್ತು. ಇದಕ್ಕೆ ಸಂಬಂಧಪಟ್ಟಂತೆ ಮಾನವ ಸಂಪನ್ಮೂಲಅಭಿವೃದ್ಧಿ ಸಚಿವಾಲಯ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತಮ್ಮ ಮಾರ್ಗದರ್ಶಿ ಸೂತ್ರಪಾಲಿಸುವಂತೆ ನಿರ್ದೇಶನ ನೀಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
ತೂಕವಿರುವ ಶಾಲಾ ಬ್ಯಾಗ್ಗಳನ್ನು ಹೊತ್ತೊಯ್ಯುವುದರಿಂದ ಮಕ್ಕಳು ದೈಹಿಕ ಮತ್ತು ಮಾನಸಿಕಸಮಸ್ಯೆಗಳಿಗೆ ಗುರಿಯಾಗುತ್ತಾರೆ. ಬೆನ್ನು ನೋವು, ಭುಜದ ನೋವು ಮತ್ತಿತರ ದೈಹಿಕ ಸಮಸ್ಯೆಗಳು ಕಾಣಿಸಿಕೊಳ್ಳಲು ಬ್ಯಾಗ್ ಭಾರವೇ ಮೂಲ ಕಾರಣ ಎಂಬುದು ವೈಜ್ಞಾನಿಕ ಅಧ್ಯಯನಗಳಿಂದ ದೃಢಪಟ್ಟಿತ್ತು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…