Featured

ಶಾಲಾ ಬ್ಯಾಗ್ ಹೊರೆ ಇಳಿಸಲು ಮುಂದಾದ ರಾಜ್ಯ ಸರ್ಕಾರ ; ಮೂರನೇ ಶನಿವಾರ ಬ್ಯಾಗ್‌ ರಹಿತ ದಿನ -Vishwanews24

ಮೂರನೇ ಶನಿವಾರ ಬ್ಯಾಗ್‌ ರಹಿತ ದಿನ

ಬೆಂಗಳೂರು: ಶಾಲಾ ಬ್ಯಾಗ್ ಹೊರೆ ಇಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದ್ದು, ಸದ್ಯದಲ್ಲೇ ಅಧಿಕೃತ ಆದೇಶವನ್ನು ಶಿಕ್ಷಣ ಇಲಾಖೆ ಹೊರಡಿಸಲಿದೆ ಎನ್ನಲಾಗಿದೆ.

ತಿಂಗಳ ಮೂರನೇ ಶನಿವಾರವನ್ನು ಬ್ಯಾಗ್‌ ರಹಿತ ದಿನವೆಂದು ಆಚರಿಸಬೇಕು ಎಂದು ಆದೇಶಿಸಲಿರುವ ಸರ್ಕಾರ, ಪಠ್ಯಪುಸ್ತಕ ಅಥವಾ ಇತರ ಪೂರಕ ಸಾಮಗ್ರಿಗಳ ಅವಶ್ಯಕತೆ ಇಲ್ಲದ ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿವಿದ್ಯಾರ್ಥಿಗಳನ್ನು ತೊಡಗಿಸುವ ನಿಟ್ಟಿನಲ್ಲಿ ಸಲಹಾತ್ಮಕ ಚಟುವಟಿಕೆಗಳ ಪಟ್ಟಿಯನ್ನು ನೀಡಲಿದೆ.

ಇನ್ನು 2019 ಎಪ್ರೀಲ್ 16 ರಂದು ನಡೆದಿದ್ದ ಸಭೆಯಲ್ಲಿ ಬ್ಯಾಗ್ ತೂಕ ವಿದ್ಯಾರ್ಥಿಯ ದೇಹದ ತೂಕದ ಶೇ 10 ನ್ನು ಮೀರದಂತಿರಬೇಕು ಅನ್ನೋ ತೀರ‍್ಮಾನಕ್ಕೆ ಬಂದಿತ್ತು ಎನ್ನಲಾಗಿದೆ. ಹೀಗಾಗಿ ಒಂದರಿಂದ ಎರಡನೇ ತರಗತಿ ಮಕ್ಕಳಿಗೆ 1.5ಕೆ.ಜಿ ಯಿಂದ 2 ಕೆ.ಜಿ , ಮೂರರಿಂದ ಐದನೇ ತರಗತಿ ಮಕ್ಕಳಿಗೆ- 2 ರಿಂದ 3 ಕೆ.ಜಿ, ಆರರಿಂದ ಎಂಟನೇ ತರಗತಿ ಮಕ್ಕಳಿಗೆ 3 ರಿಂದ 4 ಕೆ.ಜಿ, ಒಂಬತ್ತರಿಂದ ಹತ್ತನೇ ತರಗತಿ ಮಕ್ಕಳಿಗೆ 4 ರಿಂದ 5 ಕೆ.ಜಿ ತೂಕದ ಬ್ಯಾಗ ಇರಬೇಕು ಎನ್ನುವುದರ ಬಗ್ಗೆ ಸದ್ಯದಲ್ಲೇ ಸರ್ಕಾರ ಆದೇಶ ಹೊರಡಿಸಲಿದೆಯಂತೆ.

“ಕ್ಷೇತ್ರ ಸಂಚಾರ, ವಾರ್ತಾಪತ್ರಿಕೆಗಳ ಚಟುವಟಿಕೆಗಳು, ಗಣಿತದ ವಿನೋದ, ಅಬ್ಯಾಕಸ್‌ ಅಲ್ಲದೆ, ಶಾಲಾ ಬ್ಯಾಗ್‌ ಹೊರೆ ಇಳಿಸಲು ಶಾಲಾ ವಾತಾವರಣಕ್ಕೆ ಸೂಕ್ತವಾದ ಅಭ್ಯಾಸಗಳನ್ನು ಅಳವಡಿಸಬೇಕು,” ಎಂದು ಶಾಲಾಮುಖ್ಯಸ್ಥರಿಗೆ ಸೂಚಿಸಲಿದೆ.

ಅಷ್ಟೇ ಅಲ್ಲ. ವಿಜ್ಞಾನದ ಪ್ರಯೋಗ, ಪ್ರದರ್ಶನ, ಸಾಮಾನ್ಯ ಜ್ಞಾನ ಶೈಕ್ಷಣಿಕ ಸಂಘದ ಚಟುವಟಿಕೆಗಳು, ಮಣ್ಣಿನಲ್ಲಿ ವಸ್ತುಗಳ ತಯಾರಿಕೆ, ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳು ಸೇರಿದಂತೆ ಇನ್ನಿತರೆಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಿದೆ.

ಶಾಲಾ ಮಕ್ಕಳ ಬ್ಯಾಗಿನ ಹೊರೆ ಇಳಿಸುವ ವಿಚಾರದಲ್ಲಿ ಹಾಗೂ ಮಕ್ಕಳಿಗೆ ಹೋಂವರ್ಕ್ ಕೊಡುವ ವಿಚಾರದಲ್ಲಿಕೇಂದ್ರ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿತ್ತು. ಇದಕ್ಕೆ ಸಂಬಂಧಪಟ್ಟಂತೆ ಮಾನವ ಸಂಪನ್ಮೂಲಅಭಿವೃದ್ಧಿ ಸಚಿವಾಲಯ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತಮ್ಮ ಮಾರ್ಗದರ್ಶಿ ಸೂತ್ರಪಾಲಿಸುವಂತೆ ನಿರ್ದೇಶನ ನೀಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ತೂಕವಿರುವ ಶಾಲಾ ಬ್ಯಾಗ್‌ಗಳನ್ನು ಹೊತ್ತೊಯ್ಯುವುದರಿಂದ ಮಕ್ಕಳು ದೈಹಿಕ ಮತ್ತು ಮಾನಸಿಕಸಮಸ್ಯೆಗಳಿಗೆ ಗುರಿಯಾಗುತ್ತಾರೆ. ಬೆನ್ನು ನೋವು, ಭುಜದ ನೋವು ಮತ್ತಿತರ ದೈಹಿಕ ಸಮಸ್ಯೆಗಳು ಕಾಣಿಸಿಕೊಳ್ಳಲು ಬ್ಯಾಗ್‌ ಭಾರವೇ ಮೂಲ ಕಾರಣ ಎಂಬುದು ವೈಜ್ಞಾನಿಕ ಅಧ್ಯಯನಗಳಿಂದ ದೃಢಪಟ್ಟಿತ್ತು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago