Featured

ಶಾಲಾ ಬ್ಯಾಗ್ ಹೊರೆ ಇಳಿಸಲು ಮುಂದಾದ ರಾಜ್ಯ ಸರ್ಕಾರ ; ಮೂರನೇ ಶನಿವಾರ ಬ್ಯಾಗ್‌ ರಹಿತ ದಿನ -Vishwanews24

ಮೂರನೇ ಶನಿವಾರ ಬ್ಯಾಗ್‌ ರಹಿತ ದಿನ

ಬೆಂಗಳೂರು: ಶಾಲಾ ಬ್ಯಾಗ್ ಹೊರೆ ಇಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದ್ದು, ಸದ್ಯದಲ್ಲೇ ಅಧಿಕೃತ ಆದೇಶವನ್ನು ಶಿಕ್ಷಣ ಇಲಾಖೆ ಹೊರಡಿಸಲಿದೆ ಎನ್ನಲಾಗಿದೆ.

ತಿಂಗಳ ಮೂರನೇ ಶನಿವಾರವನ್ನು ಬ್ಯಾಗ್‌ ರಹಿತ ದಿನವೆಂದು ಆಚರಿಸಬೇಕು ಎಂದು ಆದೇಶಿಸಲಿರುವ ಸರ್ಕಾರ, ಪಠ್ಯಪುಸ್ತಕ ಅಥವಾ ಇತರ ಪೂರಕ ಸಾಮಗ್ರಿಗಳ ಅವಶ್ಯಕತೆ ಇಲ್ಲದ ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿವಿದ್ಯಾರ್ಥಿಗಳನ್ನು ತೊಡಗಿಸುವ ನಿಟ್ಟಿನಲ್ಲಿ ಸಲಹಾತ್ಮಕ ಚಟುವಟಿಕೆಗಳ ಪಟ್ಟಿಯನ್ನು ನೀಡಲಿದೆ.

ಇನ್ನು 2019 ಎಪ್ರೀಲ್ 16 ರಂದು ನಡೆದಿದ್ದ ಸಭೆಯಲ್ಲಿ ಬ್ಯಾಗ್ ತೂಕ ವಿದ್ಯಾರ್ಥಿಯ ದೇಹದ ತೂಕದ ಶೇ 10 ನ್ನು ಮೀರದಂತಿರಬೇಕು ಅನ್ನೋ ತೀರ‍್ಮಾನಕ್ಕೆ ಬಂದಿತ್ತು ಎನ್ನಲಾಗಿದೆ. ಹೀಗಾಗಿ ಒಂದರಿಂದ ಎರಡನೇ ತರಗತಿ ಮಕ್ಕಳಿಗೆ 1.5ಕೆ.ಜಿ ಯಿಂದ 2 ಕೆ.ಜಿ , ಮೂರರಿಂದ ಐದನೇ ತರಗತಿ ಮಕ್ಕಳಿಗೆ- 2 ರಿಂದ 3 ಕೆ.ಜಿ, ಆರರಿಂದ ಎಂಟನೇ ತರಗತಿ ಮಕ್ಕಳಿಗೆ 3 ರಿಂದ 4 ಕೆ.ಜಿ, ಒಂಬತ್ತರಿಂದ ಹತ್ತನೇ ತರಗತಿ ಮಕ್ಕಳಿಗೆ 4 ರಿಂದ 5 ಕೆ.ಜಿ ತೂಕದ ಬ್ಯಾಗ ಇರಬೇಕು ಎನ್ನುವುದರ ಬಗ್ಗೆ ಸದ್ಯದಲ್ಲೇ ಸರ್ಕಾರ ಆದೇಶ ಹೊರಡಿಸಲಿದೆಯಂತೆ.

“ಕ್ಷೇತ್ರ ಸಂಚಾರ, ವಾರ್ತಾಪತ್ರಿಕೆಗಳ ಚಟುವಟಿಕೆಗಳು, ಗಣಿತದ ವಿನೋದ, ಅಬ್ಯಾಕಸ್‌ ಅಲ್ಲದೆ, ಶಾಲಾ ಬ್ಯಾಗ್‌ ಹೊರೆ ಇಳಿಸಲು ಶಾಲಾ ವಾತಾವರಣಕ್ಕೆ ಸೂಕ್ತವಾದ ಅಭ್ಯಾಸಗಳನ್ನು ಅಳವಡಿಸಬೇಕು,” ಎಂದು ಶಾಲಾಮುಖ್ಯಸ್ಥರಿಗೆ ಸೂಚಿಸಲಿದೆ.

ಅಷ್ಟೇ ಅಲ್ಲ. ವಿಜ್ಞಾನದ ಪ್ರಯೋಗ, ಪ್ರದರ್ಶನ, ಸಾಮಾನ್ಯ ಜ್ಞಾನ ಶೈಕ್ಷಣಿಕ ಸಂಘದ ಚಟುವಟಿಕೆಗಳು, ಮಣ್ಣಿನಲ್ಲಿ ವಸ್ತುಗಳ ತಯಾರಿಕೆ, ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳು ಸೇರಿದಂತೆ ಇನ್ನಿತರೆಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಿದೆ.

ಶಾಲಾ ಮಕ್ಕಳ ಬ್ಯಾಗಿನ ಹೊರೆ ಇಳಿಸುವ ವಿಚಾರದಲ್ಲಿ ಹಾಗೂ ಮಕ್ಕಳಿಗೆ ಹೋಂವರ್ಕ್ ಕೊಡುವ ವಿಚಾರದಲ್ಲಿಕೇಂದ್ರ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿತ್ತು. ಇದಕ್ಕೆ ಸಂಬಂಧಪಟ್ಟಂತೆ ಮಾನವ ಸಂಪನ್ಮೂಲಅಭಿವೃದ್ಧಿ ಸಚಿವಾಲಯ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತಮ್ಮ ಮಾರ್ಗದರ್ಶಿ ಸೂತ್ರಪಾಲಿಸುವಂತೆ ನಿರ್ದೇಶನ ನೀಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ತೂಕವಿರುವ ಶಾಲಾ ಬ್ಯಾಗ್‌ಗಳನ್ನು ಹೊತ್ತೊಯ್ಯುವುದರಿಂದ ಮಕ್ಕಳು ದೈಹಿಕ ಮತ್ತು ಮಾನಸಿಕಸಮಸ್ಯೆಗಳಿಗೆ ಗುರಿಯಾಗುತ್ತಾರೆ. ಬೆನ್ನು ನೋವು, ಭುಜದ ನೋವು ಮತ್ತಿತರ ದೈಹಿಕ ಸಮಸ್ಯೆಗಳು ಕಾಣಿಸಿಕೊಳ್ಳಲು ಬ್ಯಾಗ್‌ ಭಾರವೇ ಮೂಲ ಕಾರಣ ಎಂಬುದು ವೈಜ್ಞಾನಿಕ ಅಧ್ಯಯನಗಳಿಂದ ದೃಢಪಟ್ಟಿತ್ತು.

 

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

6 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

7 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

7 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

7 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

8 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

9 hours ago