ಶಾಲಾ ಮಕ್ಕಳಿಗೆ ಮೊಟ್ಟೆ ಬದಲು  ತಾಯಿ ಕೈಗೆ ದುಡ್ಡು ಕೊಟ್ಟರೆ, ಇನ್ನೂ ಚೆನ್ನಾಗಿ ಆಹಾರವನ್ನ ಹಾಕಬಹುದು : ಶೋಭಾ ಕರಂದ್ಲಾಜೆ – Vishwanews24

Featured, ಉಡುಪಿ

ಶಾಲಾ ಮಕ್ಕಳಿಗೆ ಮೊಟ್ಟೆ ಬದಲು  ತಾಯಿ ಕೈಗೆ ದುಡ್ಡು ಕೊಟ್ಟರೆ, ಇನ್ನೂ ಚೆನ್ನಾಗಿ ಆಹಾರವನ್ನ ಹಾಕಬಹುದು : ಶೋಭಾ ಕರಂದ್ಲಾಜೆ – Vishwanews24

ಚಿಕ್ಕಮಗಳೂರು: ಮಕ್ಕಳ‌ ಆಹಾರವನ್ನು ತಾಯಿಗೆ ಬಿಡಬೇಕು. ತಾಯಿಗಿಂತ ಮಕ್ಕಳನ್ನು ಚೆನ್ನಾಗಿ‌ ಯಾರೂ ನೋಡಿಕೊಳ್ಳುವುದಿಲ್ಲ. ಮೊಟ್ಟೆ ಬದಲು ಆ ತಾಯಿ ಕೈಗೆ ದುಡ್ಡು ಕೊಟ್ಟರೆ, ಇನ್ನೂ ಚೆನ್ನಾಗಿ ಆಹಾರವನ್ನ ಹಾಕಬಹುದು. ಈ ಬಗ್ಗೆಯೂ ಚರ್ಚೆ ಆಗಬೇಕು ಎಂದು ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ವಿವಾದಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.

ಆಹಾರ ಪದ್ದತಿ ಅವರವರ ಆಯ್ಕೆ, ಇದಕ್ಕೆ ಒತ್ತಡ ಹೇರುವುದು ಸರಿಯಲ್ಲ. ಸರ್ಕಾರ, ಯಾವುದೇ ವ್ಯಕ್ತಿಗಳು ಒತ್ತಡ ತಂದು ಬದಲಾಯಿಸಲು ಆಗುವುದಿಲ್ಲ. ಮೊಟ್ಟೆ ಕೊಡುವುದು ಕೆಲ‌ ಸಮಾಜಕ್ಕೆ ‌ನೋವು ತರುತ್ತೆ ಅಂದ್ರೆ ಸರ್ಕಾರ ವಿಚಾರವನ್ನು ಮರುಪರಿಶೀಲನೆ ಮಾಡಬೇಕು. ಈ ಬಗ್ಗೆ ಸಿಎಂ‌ ಜೊತೆ ಚರ್ಚೆ ನಡೆಸಿ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.

ಶಾಲೆಗಳಲ್ಲಿ ಮೊಟ್ಟೆ ನೀಡುವ ವಿಚಾರಕ್ಕೆ ಸಂಬಂಧಿಸಿ ಕಳೆದ ಕೆಲವು ದಿನಗಳಿಂದ ಪರ- ವಿರೋಧ ವಿವಿಧ ಅಭಿಪ್ರಾಯಗಳು ಕೇಳಿಬಂದಿದೆ. ಮಧ್ಯಾಹ್ನ ಬಿಸಿಯೂಟ ಯೋಜನೆಯ ಭಾಗವಾಗಿ ಸರ್ಕಾರವು ಮೊಟ್ಟೆಯನ್ನು ನೀಡಲು ಮುಂದಾಗಿರುವ ಬೆಳವಣಿಗೆಯನ್ನು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಖಂಡಿಸಿದ್ದರು. ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ನಮ್ಮ ಪರಂಪರೆಯ ಭಾಗವಾಗಿರುವ ಆಹಾರ ಕ್ರಮವನ್ನು ಬದಲಿಸಬಾರದು. ಸಾಮೂಹಿಕವಾಗಿ ಮೊಟ್ಟೆ ನೀಡುವುದರಿಂದ ಹಲವರ ನಂಬಿಕೆಗಳಿಗೆ ಧಕ್ಕೆಯುಂಟಾಗುತ್ತದೆ. ಶಾಲೆ ಇರುವುದು ಶಿಕ್ಷಣ ನೀಡಲೆಂದು. ಯಾವುದೇ ಸಮುದಾಯದ ಜೀವನಶೈಲಿಯನ್ನು ಬದಲಿಸಬಾರದು. ಯಾರಿಗೆ ಯಾವುದನ್ನು ಸೇವಿಸಲು ಇಷ್ಟವಿದೆಯೋ ಅದನ್ನು ಸೇವಿಸಲಿ. ಸರ್ಕಾರ ಅದರ ಖರ್ಚು ವಹಿಸಿಕೊಳ್ಳಲಿ ಎಂದು ಸಲಹೆ ಮಾಡಿದ್ದರು.

ಆದಿ ಉಡುಪಿ – ಮಲ್ಪೆ ರಸ್ತೆ ಚತುಷ್ಪಥ ಅಭಿವೃದ್ಧಿ ಯೋಜನೆಗೆ ಟೆಂಡರ್ ನೋಟಿಫಿಕೇಶನ್ : ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಅಭಿನಂದನೆ – Vishwanews24