ಚಿಕ್ಕಮಗಳೂರು: ಮಕ್ಕಳ ಆಹಾರವನ್ನು ತಾಯಿಗೆ ಬಿಡಬೇಕು. ತಾಯಿಗಿಂತ ಮಕ್ಕಳನ್ನು ಚೆನ್ನಾಗಿ ಯಾರೂ ನೋಡಿಕೊಳ್ಳುವುದಿಲ್ಲ. ಮೊಟ್ಟೆ ಬದಲು ಆ ತಾಯಿ ಕೈಗೆ ದುಡ್ಡು ಕೊಟ್ಟರೆ, ಇನ್ನೂ ಚೆನ್ನಾಗಿ ಆಹಾರವನ್ನ ಹಾಕಬಹುದು. ಈ ಬಗ್ಗೆಯೂ ಚರ್ಚೆ ಆಗಬೇಕು ಎಂದು ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ವಿವಾದಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.
ಆಹಾರ ಪದ್ದತಿ ಅವರವರ ಆಯ್ಕೆ, ಇದಕ್ಕೆ ಒತ್ತಡ ಹೇರುವುದು ಸರಿಯಲ್ಲ. ಸರ್ಕಾರ, ಯಾವುದೇ ವ್ಯಕ್ತಿಗಳು ಒತ್ತಡ ತಂದು ಬದಲಾಯಿಸಲು ಆಗುವುದಿಲ್ಲ. ಮೊಟ್ಟೆ ಕೊಡುವುದು ಕೆಲ ಸಮಾಜಕ್ಕೆ ನೋವು ತರುತ್ತೆ ಅಂದ್ರೆ ಸರ್ಕಾರ ವಿಚಾರವನ್ನು ಮರುಪರಿಶೀಲನೆ ಮಾಡಬೇಕು. ಈ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸಿ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.
ಶಾಲೆಗಳಲ್ಲಿ ಮೊಟ್ಟೆ ನೀಡುವ ವಿಚಾರಕ್ಕೆ ಸಂಬಂಧಿಸಿ ಕಳೆದ ಕೆಲವು ದಿನಗಳಿಂದ ಪರ- ವಿರೋಧ ವಿವಿಧ ಅಭಿಪ್ರಾಯಗಳು ಕೇಳಿಬಂದಿದೆ. ಮಧ್ಯಾಹ್ನ ಬಿಸಿಯೂಟ ಯೋಜನೆಯ ಭಾಗವಾಗಿ ಸರ್ಕಾರವು ಮೊಟ್ಟೆಯನ್ನು ನೀಡಲು ಮುಂದಾಗಿರುವ ಬೆಳವಣಿಗೆಯನ್ನು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಖಂಡಿಸಿದ್ದರು. ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ನಮ್ಮ ಪರಂಪರೆಯ ಭಾಗವಾಗಿರುವ ಆಹಾರ ಕ್ರಮವನ್ನು ಬದಲಿಸಬಾರದು. ಸಾಮೂಹಿಕವಾಗಿ ಮೊಟ್ಟೆ ನೀಡುವುದರಿಂದ ಹಲವರ ನಂಬಿಕೆಗಳಿಗೆ ಧಕ್ಕೆಯುಂಟಾಗುತ್ತದೆ. ಶಾಲೆ ಇರುವುದು ಶಿಕ್ಷಣ ನೀಡಲೆಂದು. ಯಾವುದೇ ಸಮುದಾಯದ ಜೀವನಶೈಲಿಯನ್ನು ಬದಲಿಸಬಾರದು. ಯಾರಿಗೆ ಯಾವುದನ್ನು ಸೇವಿಸಲು ಇಷ್ಟವಿದೆಯೋ ಅದನ್ನು ಸೇವಿಸಲಿ. ಸರ್ಕಾರ ಅದರ ಖರ್ಚು ವಹಿಸಿಕೊಳ್ಳಲಿ ಎಂದು ಸಲಹೆ ಮಾಡಿದ್ದರು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…