Featured

ಶಾಲಾ ಮಕ್ಕಳಿಗೆ ಮೊಟ್ಟೆ ಬದಲು  ತಾಯಿ ಕೈಗೆ ದುಡ್ಡು ಕೊಟ್ಟರೆ, ಇನ್ನೂ ಚೆನ್ನಾಗಿ ಆಹಾರವನ್ನ ಹಾಕಬಹುದು : ಶೋಭಾ ಕರಂದ್ಲಾಜೆ – Vishwanews24

ಶಾಲಾ ಮಕ್ಕಳಿಗೆ ಮೊಟ್ಟೆ ಬದಲು  ತಾಯಿ ಕೈಗೆ ದುಡ್ಡು ಕೊಟ್ಟರೆ, ಇನ್ನೂ ಚೆನ್ನಾಗಿ ಆಹಾರವನ್ನ ಹಾಕಬಹುದು : ಶೋಭಾ ಕರಂದ್ಲಾಜೆ – Vishwanews24

ಚಿಕ್ಕಮಗಳೂರು: ಮಕ್ಕಳ‌ ಆಹಾರವನ್ನು ತಾಯಿಗೆ ಬಿಡಬೇಕು. ತಾಯಿಗಿಂತ ಮಕ್ಕಳನ್ನು ಚೆನ್ನಾಗಿ‌ ಯಾರೂ ನೋಡಿಕೊಳ್ಳುವುದಿಲ್ಲ. ಮೊಟ್ಟೆ ಬದಲು ಆ ತಾಯಿ ಕೈಗೆ ದುಡ್ಡು ಕೊಟ್ಟರೆ, ಇನ್ನೂ ಚೆನ್ನಾಗಿ ಆಹಾರವನ್ನ ಹಾಕಬಹುದು. ಈ ಬಗ್ಗೆಯೂ ಚರ್ಚೆ ಆಗಬೇಕು ಎಂದು ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ವಿವಾದಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.

ಆಹಾರ ಪದ್ದತಿ ಅವರವರ ಆಯ್ಕೆ, ಇದಕ್ಕೆ ಒತ್ತಡ ಹೇರುವುದು ಸರಿಯಲ್ಲ. ಸರ್ಕಾರ, ಯಾವುದೇ ವ್ಯಕ್ತಿಗಳು ಒತ್ತಡ ತಂದು ಬದಲಾಯಿಸಲು ಆಗುವುದಿಲ್ಲ. ಮೊಟ್ಟೆ ಕೊಡುವುದು ಕೆಲ‌ ಸಮಾಜಕ್ಕೆ ‌ನೋವು ತರುತ್ತೆ ಅಂದ್ರೆ ಸರ್ಕಾರ ವಿಚಾರವನ್ನು ಮರುಪರಿಶೀಲನೆ ಮಾಡಬೇಕು. ಈ ಬಗ್ಗೆ ಸಿಎಂ‌ ಜೊತೆ ಚರ್ಚೆ ನಡೆಸಿ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.

ಶಾಲೆಗಳಲ್ಲಿ ಮೊಟ್ಟೆ ನೀಡುವ ವಿಚಾರಕ್ಕೆ ಸಂಬಂಧಿಸಿ ಕಳೆದ ಕೆಲವು ದಿನಗಳಿಂದ ಪರ- ವಿರೋಧ ವಿವಿಧ ಅಭಿಪ್ರಾಯಗಳು ಕೇಳಿಬಂದಿದೆ. ಮಧ್ಯಾಹ್ನ ಬಿಸಿಯೂಟ ಯೋಜನೆಯ ಭಾಗವಾಗಿ ಸರ್ಕಾರವು ಮೊಟ್ಟೆಯನ್ನು ನೀಡಲು ಮುಂದಾಗಿರುವ ಬೆಳವಣಿಗೆಯನ್ನು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಖಂಡಿಸಿದ್ದರು. ಆಹಾರದ ವಿಷಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ನಮ್ಮ ಪರಂಪರೆಯ ಭಾಗವಾಗಿರುವ ಆಹಾರ ಕ್ರಮವನ್ನು ಬದಲಿಸಬಾರದು. ಸಾಮೂಹಿಕವಾಗಿ ಮೊಟ್ಟೆ ನೀಡುವುದರಿಂದ ಹಲವರ ನಂಬಿಕೆಗಳಿಗೆ ಧಕ್ಕೆಯುಂಟಾಗುತ್ತದೆ. ಶಾಲೆ ಇರುವುದು ಶಿಕ್ಷಣ ನೀಡಲೆಂದು. ಯಾವುದೇ ಸಮುದಾಯದ ಜೀವನಶೈಲಿಯನ್ನು ಬದಲಿಸಬಾರದು. ಯಾರಿಗೆ ಯಾವುದನ್ನು ಸೇವಿಸಲು ಇಷ್ಟವಿದೆಯೋ ಅದನ್ನು ಸೇವಿಸಲಿ. ಸರ್ಕಾರ ಅದರ ಖರ್ಚು ವಹಿಸಿಕೊಳ್ಳಲಿ ಎಂದು ಸಲಹೆ ಮಾಡಿದ್ದರು.

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

12 hours ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

12 hours ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

12 hours ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

13 hours ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

14 hours ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

2 days ago