Featured

ಶಾಲೆಗಳನ್ನು ನಿಲ್ಲಿಸಬೇಕಾದ ಅನಿವಾರ್ಯತೆ ಎದುರಾದರೆ ಹಿಂದೇಟು ಹಾಕುವುದಿಲ್ಲ , ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುವುದಿಲ್ಲ: ಶಿಕ್ಷಣ ಸಚಿವ ಬಿ ಸಿ ನಾಗೇಶ್ – Vishwanews24

ಶಾಲೆಗಳನ್ನು ನಿಲ್ಲಿಸಬೇಕಾದ ಅನಿವಾರ್ಯತೆ ಎದುರಾದರೆ ಹಿಂದೇಟು ಹಾಕುವುದಿಲ್ಲ , ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುವುದಿಲ್ಲ: ಶಿಕ್ಷಣ ಸಚಿವ ಬಿ ಸಿ ನಾಗೇಶ್ – Vishwanews24

ಬೆಂಗಳೂರು: ರಾಜ್ಯದ ಕೆಲವು ಶಾಲಾ-ಕಾಲೇಜುಗಳಲ್ಲಿ ಅದರಲ್ಲೂ ವಸತಿ ಶಾಲೆಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ಮಕ್ಕಳ ಪೋಷಕರು ಆತಂಕಗೊಳ್ಳುವುದು ಸಹಜ. ಆದರೆ ಮಕ್ಕಳ ಜೀವದ ಜೊತೆ ನಾವು ಚೆಲ್ಲಾಟವಾಡುವುದಿಲ್ಲ, ಕಾಳಜಿ ವಹಿಸುತ್ತೇವೆ. ಆತಂಕಗೊಳ್ಳುವುದಿಲ್ಲ ಬೇಡ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅಭಯ ನೀಡಿದ್ದಾರೆ.

ಕೊರೋನಾ ಎರಡನೇ ಅಲೆ ಕಡಿಮೆಯಾಗಿ ಎಲ್ಲವೂ ಸಹಜ ಸ್ಥಿತಿಗೆ ಬರುತ್ತಿರುವಾಗ ಇತ್ತೀಚೆಗಷ್ಟೇ ಶಾಲೆಗಳು ಆರಂಭವಾಗಿದ್ದವು. ಈಗ ಮತ್ತೆ ಅಲ್ಲಲ್ಲಿ ಶಾಲಾ-ಕಾಲೇಜು ಮಕ್ಕಳಲ್ಲಿ ಸೋಂಕು ಉಲ್ಭಣವಾಗುತ್ತಿದೆ. ಈ ಬಗ್ಗೆ ಇಂದು ವಿಧಾನ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೊರೋನಾ ಸೋಂಕು ಹೆಚ್ಚಳವಾದರೆ ಬದಲಿ ಕ್ರಮ ಏನು ತೆಗೆದುಕೊಳ್ಳಬೇಕೆಂದು ಯೋಚಿಸುತ್ತೇವೆ. ಅಕಸ್ಮಾತ್ ಪರೀಕ್ಷೆ ಮತ್ತು ಭೌತಿಕ ತರಗತಿಗಳನ್ನು ನಿಲ್ಲಿಸಬೇಕೆಂದರೆ ಆ ಕ್ರಮಕ್ಕೂ ಸಿದ್ಧರಿದ್ದೇವೆ ಎಂದರು. ಅಂದರೆ ಅಗತ್ಯಬಿದ್ದರೆ ಶಾಲೆಗಳನ್ನು ನಿಲ್ಲಿಸುವ ನಿರ್ಧಾರ ಕೈಗೊಳ್ಳುವ ಸೂಚನೆಯನ್ನು ಶಿಕ್ಷಣ ಸಚಿವರು ಇಂದು ನೀಡಿದ್ದಾರೆ.

ಕೊನೆಯ ದಿನದವರೆಗೂ ಬೆಳವಣಿಗೆಗಳನ್ನು ಗಮನಿಸುತ್ತೇವೆ, ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎನ್ನುವುದಾದರೆ ಶಿಕ್ಷಣ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ. ಶಾಲೆಗಳನ್ನು, ಪರೀಕ್ಷೆಗಳನ್ನು ನಿಲ್ಲಿಸಬೇಕಾದ ಅನಿವಾರ್ಯತೆ ಎದುರಾದರೆ ಹಿಂದೇಟು ಹಾಕುವುದಿಲ್ಲ, ಇವತ್ತಿನ ತಜ್ಞರ ವರದಿಯಲ್ಲಿ ಯಾವುದೇ ಗಾಬರಿಪಡುವ ಅಗತ್ಯವಿಲ್ಲ ಎಂದು ಹೇಳುತ್ತಿದ್ದಾರೆ ಎಂದರು.

ಚಿಕ್ಕಮಗಳೂರಿನ ಜವಾಬರ್ ನವೋದಯ ವಸತಿ ಶಾಲೆಯ ಮಕ್ಕಳಿಗೆ ಸೋಂಕು ತಗುಲಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ನಿನ್ನೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಹೋಗಿ ಆರೋಗ್ಯ ಮತ್ತು ಇತರ ಮೂಲಭೂತ ವ್ಯವಸ್ಥೆಯ ಉಸ್ತುವಾರಿ ನೋಡಿಕೊಂಡಿದ್ದಾರೆ. ವಸತಿ ಶಾಲೆಯ ಮಕ್ಕಳಿಗೆ ವೈದ್ಯರು ಮತ್ತು ಹಗಲು-ರಾತ್ರಿ ಶುಶ್ರೂಷಕಿಯರ ಸೇವೆಯನ್ನು ಇರಿಸಿದ್ದಾರೆ. ಸೋಂಕಿತ ಮಕ್ಕಳು, ಶಿಕ್ಷಕರು ಮತ್ತು ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

ಕಳೆದ ವಾರ ಕೊರೋನಾ ಪಾಸಿಟಿವ್ ಬಂದ ಶಾಲೆಗಳ ಮಕ್ಕಳ ಬಗ್ಗೆ ವರದಿ ತರಿಸಿಕೊಂಡಿದ್ದೇವೆ. ಇದುವರೆಗೆ ಯಾರಿಗೂ ತೊಂದರೆಯಾಗಿಲ್ಲ. ಸಕಾಲಕ್ಕೆ ಚಿಕಿತ್ಸೆ ಸಿಕ್ಕಿ ಗುಣಮುಖರಾಗುತ್ತಿದ್ದಾರೆ. ಆದರೂ ಇತ್ತೀಚೆಗೆ ಹಲವು ಶಾಲೆಗಳಲ್ಲಿ ಹತ್ತಾರು ಮಕ್ಕಳಿಗೆ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಶಾಲೆಗಳಲ್ಲಿ ಕೋವಿಡ್ ಶಿಷ್ಠಾಚಾರಗಳನ್ನು ಕಠಿಣವಾಗಿ ಜಾರಿಗೆ ತರುವ ಬಗ್ಗೆ ಚರ್ಚೆ ನಡೆಸಿ ಮುಂದಿನ ದಿನಗಳಲ್ಲಿ ಜಾರಿಗೆ ತರಲಾಗುವುದು ಎಂದರು.

 

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

21 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

23 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

23 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

24 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

24 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

24 hours ago