Featured

ಶಾಲೆಗಳನ್ನು ನಿಲ್ಲಿಸಬೇಕಾದ ಅನಿವಾರ್ಯತೆ ಎದುರಾದರೆ ಹಿಂದೇಟು ಹಾಕುವುದಿಲ್ಲ , ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುವುದಿಲ್ಲ: ಶಿಕ್ಷಣ ಸಚಿವ ಬಿ ಸಿ ನಾಗೇಶ್ – Vishwanews24

ಶಾಲೆಗಳನ್ನು ನಿಲ್ಲಿಸಬೇಕಾದ ಅನಿವಾರ್ಯತೆ ಎದುರಾದರೆ ಹಿಂದೇಟು ಹಾಕುವುದಿಲ್ಲ , ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುವುದಿಲ್ಲ: ಶಿಕ್ಷಣ ಸಚಿವ ಬಿ ಸಿ ನಾಗೇಶ್ – Vishwanews24

ಬೆಂಗಳೂರು: ರಾಜ್ಯದ ಕೆಲವು ಶಾಲಾ-ಕಾಲೇಜುಗಳಲ್ಲಿ ಅದರಲ್ಲೂ ವಸತಿ ಶಾಲೆಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ಮಕ್ಕಳ ಪೋಷಕರು ಆತಂಕಗೊಳ್ಳುವುದು ಸಹಜ. ಆದರೆ ಮಕ್ಕಳ ಜೀವದ ಜೊತೆ ನಾವು ಚೆಲ್ಲಾಟವಾಡುವುದಿಲ್ಲ, ಕಾಳಜಿ ವಹಿಸುತ್ತೇವೆ. ಆತಂಕಗೊಳ್ಳುವುದಿಲ್ಲ ಬೇಡ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅಭಯ ನೀಡಿದ್ದಾರೆ.

ಕೊರೋನಾ ಎರಡನೇ ಅಲೆ ಕಡಿಮೆಯಾಗಿ ಎಲ್ಲವೂ ಸಹಜ ಸ್ಥಿತಿಗೆ ಬರುತ್ತಿರುವಾಗ ಇತ್ತೀಚೆಗಷ್ಟೇ ಶಾಲೆಗಳು ಆರಂಭವಾಗಿದ್ದವು. ಈಗ ಮತ್ತೆ ಅಲ್ಲಲ್ಲಿ ಶಾಲಾ-ಕಾಲೇಜು ಮಕ್ಕಳಲ್ಲಿ ಸೋಂಕು ಉಲ್ಭಣವಾಗುತ್ತಿದೆ. ಈ ಬಗ್ಗೆ ಇಂದು ವಿಧಾನ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೊರೋನಾ ಸೋಂಕು ಹೆಚ್ಚಳವಾದರೆ ಬದಲಿ ಕ್ರಮ ಏನು ತೆಗೆದುಕೊಳ್ಳಬೇಕೆಂದು ಯೋಚಿಸುತ್ತೇವೆ. ಅಕಸ್ಮಾತ್ ಪರೀಕ್ಷೆ ಮತ್ತು ಭೌತಿಕ ತರಗತಿಗಳನ್ನು ನಿಲ್ಲಿಸಬೇಕೆಂದರೆ ಆ ಕ್ರಮಕ್ಕೂ ಸಿದ್ಧರಿದ್ದೇವೆ ಎಂದರು. ಅಂದರೆ ಅಗತ್ಯಬಿದ್ದರೆ ಶಾಲೆಗಳನ್ನು ನಿಲ್ಲಿಸುವ ನಿರ್ಧಾರ ಕೈಗೊಳ್ಳುವ ಸೂಚನೆಯನ್ನು ಶಿಕ್ಷಣ ಸಚಿವರು ಇಂದು ನೀಡಿದ್ದಾರೆ.

ಕೊನೆಯ ದಿನದವರೆಗೂ ಬೆಳವಣಿಗೆಗಳನ್ನು ಗಮನಿಸುತ್ತೇವೆ, ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎನ್ನುವುದಾದರೆ ಶಿಕ್ಷಣ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ. ಶಾಲೆಗಳನ್ನು, ಪರೀಕ್ಷೆಗಳನ್ನು ನಿಲ್ಲಿಸಬೇಕಾದ ಅನಿವಾರ್ಯತೆ ಎದುರಾದರೆ ಹಿಂದೇಟು ಹಾಕುವುದಿಲ್ಲ, ಇವತ್ತಿನ ತಜ್ಞರ ವರದಿಯಲ್ಲಿ ಯಾವುದೇ ಗಾಬರಿಪಡುವ ಅಗತ್ಯವಿಲ್ಲ ಎಂದು ಹೇಳುತ್ತಿದ್ದಾರೆ ಎಂದರು.

ಚಿಕ್ಕಮಗಳೂರಿನ ಜವಾಬರ್ ನವೋದಯ ವಸತಿ ಶಾಲೆಯ ಮಕ್ಕಳಿಗೆ ಸೋಂಕು ತಗುಲಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ನಿನ್ನೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಹೋಗಿ ಆರೋಗ್ಯ ಮತ್ತು ಇತರ ಮೂಲಭೂತ ವ್ಯವಸ್ಥೆಯ ಉಸ್ತುವಾರಿ ನೋಡಿಕೊಂಡಿದ್ದಾರೆ. ವಸತಿ ಶಾಲೆಯ ಮಕ್ಕಳಿಗೆ ವೈದ್ಯರು ಮತ್ತು ಹಗಲು-ರಾತ್ರಿ ಶುಶ್ರೂಷಕಿಯರ ಸೇವೆಯನ್ನು ಇರಿಸಿದ್ದಾರೆ. ಸೋಂಕಿತ ಮಕ್ಕಳು, ಶಿಕ್ಷಕರು ಮತ್ತು ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

ಕಳೆದ ವಾರ ಕೊರೋನಾ ಪಾಸಿಟಿವ್ ಬಂದ ಶಾಲೆಗಳ ಮಕ್ಕಳ ಬಗ್ಗೆ ವರದಿ ತರಿಸಿಕೊಂಡಿದ್ದೇವೆ. ಇದುವರೆಗೆ ಯಾರಿಗೂ ತೊಂದರೆಯಾಗಿಲ್ಲ. ಸಕಾಲಕ್ಕೆ ಚಿಕಿತ್ಸೆ ಸಿಕ್ಕಿ ಗುಣಮುಖರಾಗುತ್ತಿದ್ದಾರೆ. ಆದರೂ ಇತ್ತೀಚೆಗೆ ಹಲವು ಶಾಲೆಗಳಲ್ಲಿ ಹತ್ತಾರು ಮಕ್ಕಳಿಗೆ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಶಾಲೆಗಳಲ್ಲಿ ಕೋವಿಡ್ ಶಿಷ್ಠಾಚಾರಗಳನ್ನು ಕಠಿಣವಾಗಿ ಜಾರಿಗೆ ತರುವ ಬಗ್ಗೆ ಚರ್ಚೆ ನಡೆಸಿ ಮುಂದಿನ ದಿನಗಳಲ್ಲಿ ಜಾರಿಗೆ ತರಲಾಗುವುದು ಎಂದರು.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

8 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

20 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

35 minutes ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

4 hours ago