Featured

ಶಾಲೆಗಳಲ್ಲಿ ‘ವಂದೇ ಮಾತರಂ’ ಹಾಡನ್ನು ಕಡ್ಡಾಯಗೊಳಿಸಬೇಕು: ಸುಧಾ ಮೂರ್ತಿ ಮನವಿ – vishwanews24

ನಾನು ಸಂಸದೆ ಎಂಬ ಹುದ್ದೆಯಲ್ಲಿ ಇಲ್ಲಿ ನಿಲ್ಲುತ್ತಿಲ್ಲ; ಭಾರತ ಮಾತೆಯ ಮಗಳಾಗಿ ನಿಂತಿದ್ದೇನೆ: ಸುಧಾ ಮೂರ್ತಿ ಮನವಿ

ಹೊಸದಿಲ್ಲಿ: ಶಾಲಾ ಮಕ್ಕಳಲ್ಲಿ ದೇಶಭಕ್ತಿ ಬೆಳೆಸುವ ನಿಟ್ಟಿನಲ್ಲಿ ವಂದೇ ಮಾತರಂ ಹಾಡನ್ನು ಕಡ್ಡಾಯಗೊಳಿಸಬೇಕೆಂದು ರಾಜ್ಯಸಭೆ ಸಂಸದೆ ಸುಧಾ ಮೂರ್ತಿ ಸರಕಾರವನ್ನು ಒತ್ತಾಯಿಸಿದ್ದಾರೆ.

ಮಂಗಳವಾರ ವಂದೇ ಮಾತರಂ ರಚನೆಯ 150ನೇ ವರ್ಷಾಚರಣೆಯ ವಿಶೇಷ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

“ನಾನು ಸಂಸದೆ ಎಂಬ ಹುದ್ದೆಯಲ್ಲಿ ಇಲ್ಲಿ ನಿಲ್ಲುತ್ತಿಲ್ಲ; ಭಾರತ ಮಾತೆಯ ಮಗಳಾಗಿ ನಿಂತಿದ್ದೇನೆ” ಎಂದು ಮಾತು ಪ್ರಾರಂಭಿಸಿದ ಸುಧಾ ಮೂರ್ತಿ, ವಂದೇ ಮಾತರಂನ ತಾತ್ವಿಕ ಅರ್ಥ, ಅದರ ಸಾಂಸ್ಕೃತಿಕ ಪರಿಣಾಮಗಳನ್ನು ಸದನಕ್ಕೆ ನೆನಪಿಸಿದರು.

ಭಾರತವನ್ನು ಒಂದು ಬಣ್ಣಬಣ್ಣದ ಹೊದಿಕೆಗೆ ಹೋಲಿಸಿದ ಅವರು, “ಪ್ರತಿಯೊಂದು ರಾಜ್ಯವೂ ಬಟ್ಟೆಯ ತುಂಡು; ಅವನ್ನು ದಾರದ ಸೂಜಿಯಿಂದ ಜೋಡಿಸುವ ಕೆಲಸ ವಂದೇ ಮಾತರಂ ಮಾಡುತ್ತದೆ” ಎಂದು ಹೇಳಿದರು.

“ತಾಯ್ನಾಡು ಎಂಬ ಪರಿಕಲ್ಪನೆ ನಕ್ಷೆ, ಧ್ವಜಗಳಿಗೆ ಸೀಮಿತವಲ್ಲ; ಇದು ಜೀವನ, ಭಾವನೆ, ಆಳವಾದ ನಿಷ್ಠೆಯ ಸಂಕೇತ” ಎಂದು ಅವರು ಅಭಿಪ್ರಾಯಪಟ್ಟರು.

ವಂದೇ ಮಾತರಂ ಕಲಿಸುವುದರ ಅಗತ್ಯತೆಯನ್ನು ಉಲ್ಲೇಖಿಸಿದ ಸುಧಾ ಮೂರ್ತಿ, “ಮಕ್ಕಳಿಗೆ ಜನಗಣಮನ ಕಲಿಸುತ್ತೇವೆ. ವಂದೇ ಮಾತರಂ ಕಲಿಸಲು ಹೆಚ್ಚುವರಿ ಮೂರು ನಿಮಿಷ ಸಾಕು. ಕಲಿಸದೇ ಹೋದರೆ ಮುಂದಿನ ಪೀಳಿಗೆ ಹಾಡಿನ ಸಂಪೂರ್ಣ ಪಠ್ಯವನ್ನೇ ಕಳೆದುಕೊಳ್ಳಬಹುದಾದ ಅಪಾಯ ಇದೆ” ಎಂದು ಕಳವಳ ವ್ಯಕ್ತಪಡಿಸಿದರು.

ಶಿಕ್ಷಣ ಸಚಿವಾಲಯವನ್ನು ಉದ್ದೇಶಿಸಿ ಅವರು,“ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸಬೇಕು. ದೇಶಭಕ್ತಿ ಎಂದರೆ ಸಹಾನುಭೂತಿ, ತ್ಯಾಗ, ತಾಯ್ನಾಡಿನ ರಕ್ಷಣೆಯ ಮೌಲ್ಯಗಳು—ಇವೆಲ್ಲವೂ ವಂದೇ ಮಾತರಂ ರೂಪಿಸಿರುವ ಸಂದೇಶಗಳಲ್ಲಿ ಅಡಕವಾಗಿವೆ” ಎಂದು ಹೇಳಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

2 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

2 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

2 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

3 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

3 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

4 hours ago