Featured

ಶಾಲೆಗಳಲ್ಲಿ ‘ವಂದೇ ಮಾತರಂ’ ಹಾಡನ್ನು ಕಡ್ಡಾಯಗೊಳಿಸಬೇಕು: ಸುಧಾ ಮೂರ್ತಿ ಮನವಿ – vishwanews24

ನಾನು ಸಂಸದೆ ಎಂಬ ಹುದ್ದೆಯಲ್ಲಿ ಇಲ್ಲಿ ನಿಲ್ಲುತ್ತಿಲ್ಲ; ಭಾರತ ಮಾತೆಯ ಮಗಳಾಗಿ ನಿಂತಿದ್ದೇನೆ: ಸುಧಾ ಮೂರ್ತಿ ಮನವಿ

ಹೊಸದಿಲ್ಲಿ: ಶಾಲಾ ಮಕ್ಕಳಲ್ಲಿ ದೇಶಭಕ್ತಿ ಬೆಳೆಸುವ ನಿಟ್ಟಿನಲ್ಲಿ ವಂದೇ ಮಾತರಂ ಹಾಡನ್ನು ಕಡ್ಡಾಯಗೊಳಿಸಬೇಕೆಂದು ರಾಜ್ಯಸಭೆ ಸಂಸದೆ ಸುಧಾ ಮೂರ್ತಿ ಸರಕಾರವನ್ನು ಒತ್ತಾಯಿಸಿದ್ದಾರೆ.

ಮಂಗಳವಾರ ವಂದೇ ಮಾತರಂ ರಚನೆಯ 150ನೇ ವರ್ಷಾಚರಣೆಯ ವಿಶೇಷ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

“ನಾನು ಸಂಸದೆ ಎಂಬ ಹುದ್ದೆಯಲ್ಲಿ ಇಲ್ಲಿ ನಿಲ್ಲುತ್ತಿಲ್ಲ; ಭಾರತ ಮಾತೆಯ ಮಗಳಾಗಿ ನಿಂತಿದ್ದೇನೆ” ಎಂದು ಮಾತು ಪ್ರಾರಂಭಿಸಿದ ಸುಧಾ ಮೂರ್ತಿ, ವಂದೇ ಮಾತರಂನ ತಾತ್ವಿಕ ಅರ್ಥ, ಅದರ ಸಾಂಸ್ಕೃತಿಕ ಪರಿಣಾಮಗಳನ್ನು ಸದನಕ್ಕೆ ನೆನಪಿಸಿದರು.

ಭಾರತವನ್ನು ಒಂದು ಬಣ್ಣಬಣ್ಣದ ಹೊದಿಕೆಗೆ ಹೋಲಿಸಿದ ಅವರು, “ಪ್ರತಿಯೊಂದು ರಾಜ್ಯವೂ ಬಟ್ಟೆಯ ತುಂಡು; ಅವನ್ನು ದಾರದ ಸೂಜಿಯಿಂದ ಜೋಡಿಸುವ ಕೆಲಸ ವಂದೇ ಮಾತರಂ ಮಾಡುತ್ತದೆ” ಎಂದು ಹೇಳಿದರು.

“ತಾಯ್ನಾಡು ಎಂಬ ಪರಿಕಲ್ಪನೆ ನಕ್ಷೆ, ಧ್ವಜಗಳಿಗೆ ಸೀಮಿತವಲ್ಲ; ಇದು ಜೀವನ, ಭಾವನೆ, ಆಳವಾದ ನಿಷ್ಠೆಯ ಸಂಕೇತ” ಎಂದು ಅವರು ಅಭಿಪ್ರಾಯಪಟ್ಟರು.

ವಂದೇ ಮಾತರಂ ಕಲಿಸುವುದರ ಅಗತ್ಯತೆಯನ್ನು ಉಲ್ಲೇಖಿಸಿದ ಸುಧಾ ಮೂರ್ತಿ, “ಮಕ್ಕಳಿಗೆ ಜನಗಣಮನ ಕಲಿಸುತ್ತೇವೆ. ವಂದೇ ಮಾತರಂ ಕಲಿಸಲು ಹೆಚ್ಚುವರಿ ಮೂರು ನಿಮಿಷ ಸಾಕು. ಕಲಿಸದೇ ಹೋದರೆ ಮುಂದಿನ ಪೀಳಿಗೆ ಹಾಡಿನ ಸಂಪೂರ್ಣ ಪಠ್ಯವನ್ನೇ ಕಳೆದುಕೊಳ್ಳಬಹುದಾದ ಅಪಾಯ ಇದೆ” ಎಂದು ಕಳವಳ ವ್ಯಕ್ತಪಡಿಸಿದರು.

ಶಿಕ್ಷಣ ಸಚಿವಾಲಯವನ್ನು ಉದ್ದೇಶಿಸಿ ಅವರು,“ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸಬೇಕು. ದೇಶಭಕ್ತಿ ಎಂದರೆ ಸಹಾನುಭೂತಿ, ತ್ಯಾಗ, ತಾಯ್ನಾಡಿನ ರಕ್ಷಣೆಯ ಮೌಲ್ಯಗಳು—ಇವೆಲ್ಲವೂ ವಂದೇ ಮಾತರಂ ರೂಪಿಸಿರುವ ಸಂದೇಶಗಳಲ್ಲಿ ಅಡಕವಾಗಿವೆ” ಎಂದು ಹೇಳಿದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

21 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago