Featured

ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ – vishwanews24

ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಅಂದ್ರೆ ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ.

 

ಸತ್ತೋಲೆನಲ್ಲಿ ಏನಿದೆ?

ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು. ರಾಜಕೀಯ ಮುಖಂಡರುಗಳು, ಮಠಾಧೀಶರು ಇತ್ಯಾದಿ ತಮ್ಮ ಅಥವಾ ತಮ್ಮ ಮಕ್ಕಳ ಜನ್ಮದಿನವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚುವ ಮೂಲಕ ಅದ್ದೂರಿಯಾಗಿ ಆಚರಿಸುತ್ತಿರುವುದು ಕಂಡುಬಂದಿದೆ.

ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲಾಗುವ ಮಕ್ಕಳು ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳು, ಬಾಲ ಕಾರ್ಮಿಕ ಪದ್ದತಿಯಿಂದ ರಕ್ಷಿಸಲ್ಪಟ್ಟಿ, ಬಾಲ್ಯ ವಿವಾಹಕ್ಕೆ ಒಳಗಾದ, ಅತ್ಯಾಚಾರಕ್ಕೆ ಒಳಗಾದ. ತಂದೆ-ತಾಯಿಯಿಂದ ತಿರಸ್ಕರಿಸಲ್ಪಟ್ಟ, ತಾಯಿ ಅಥವಾ ತಂದೆ ಇಲ್ಲದ, ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟ ಇತ್ಯಾದಿ ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ/ಬಾಲನ್ಯಾಯ ಮಂಡಳಿಗಳ ಆದೇಶದ ಮೂಲಕ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲು ಮಾಡಲಾಗಿರುತ್ತದೆ.

ಈ ಎಲ್ಲಾ ವರ್ಗದ ಮಕ್ಕಳು ಸಮಾಜದಿಂದ ವಂಚಿತರಾಗಿ ಮನನೊಂದವರಾಗಿರುವುದರಿಂದ ಮಕ್ಕಳ ಪಾಲನಾ ಸಂಸ್ಥೆಯಲ್ಲಿ ದಾಖಲಾಗಿರುವ ಮಕ್ಕಳ ಮನಸ್ಸಿಗೆ ಖುಷಿ ತರುವಂತಹ ಸೃಜನಶೀಲತೆಯ ಕಾರ್ಯಕ್ರಮಗಳನ್ನು ಏರ್ಪಡಿಸಿ ಮಕ್ಕಳ ಮನಸ್ಸು ಸಧೃಡ ಹಾಗೂ ಆಹ್ಲಾದಕರವಾಗುವಂತೆ ಪ್ರೋತ್ಸಾಹಿಸಬೇಕಾಗುತ್ತದೆ.

ಆದರೆ ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ಇತ್ಯಾದಿ ಗಣ್ಯವ್ಯಕ್ತಿಗಳು ಅವರ ಹಾಗೂ ಅವರ ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚುವ ಅದ್ದೂರಿ ಕಾರ್ಯಕ್ರಮಗಳು ಸಂಸ್ಥೆಯಲ್ಲಿ ಆಚರಿಸುವುದರಿಂದ ಮಕ್ಕಳ ಪಾಲನಾ ಸಂಸ್ಥೆಯ ಮಕ್ಕಳಿಗೆ ಅವರ ಹುಟ್ಟು ಹಬ್ಬ ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗದೇ ಆಚರಿಸಲ್ಪಡುತ್ತಿರುವ ಹುಟ್ಟುಹಬ್ಬದೊಂದಿಗೆ ಹೋಲಿಕೆ ಮಾಡಿಕೊಂಡಲ್ಲಿ ಈ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಿ, ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಇಂತಹ ಆಚರಣೆಗಳು ಸದರಿ ಮಕ್ಕಳ ಆತ್ಮಾಭಿಮಾನ, ಆತ್ಮಗೌರವಕ್ಕೆ ಧಕ್ಕೆಯನ್ನುಂಟು ಮಾಡುತ್ತವೆ.

ಮಕ್ಕಳು ಕುಟುಂಬದಲ್ಲಿ ಬೆಳೆಯುವ ಬೇರೆ ಯಾವುದೇ ಮಗುವಿಗಿಂತ ಕಡಿಮೆ ಇಲ್ಲ ಎಂಬ ಭಾವನೆಯನ್ನು ಕಾಪಾಡುವ ಸಲುವಾಗಿ ಈ ಮಕ್ಕಳ ಹುಟ್ಟುಹಬ್ಬ ಹಾಗೂ ಸರ್ಕಾರದ ಆದೇಶದ ಮೂಲಕ ನಿಗದಿಪಡಿಸಿದ ವ್ಯಕ್ತಿಗಳ ಹುಟ್ಟುಹಬ್ಬ ಆಚರಣೆಯನ್ನು ಹೊರತು ಪಡಿಸಿ, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಬೇರೆ ಯಾರ ಹುಟ್ಟುಹಬ್ಬ ಆಚರಿಸುವುದನ್ನು ಈ ಮೂಲಕ ನಿಷೇಧಿಸಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago