ಬೆಂಗಳೂರು: ಶಾಲೆಗಳ ಆರಂಭದ ವಿಷಯವನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಾತ್ರ ಈ ನಿರ್ಧಾರ ಕೈಗೊಳ್ಳಲಾಗಿದೆ. ಅದೇ ರೀತಿ ನನ್ನ ಹಾಗೂ ಸಚಿವ ಸುಧಾಕರ್ ನಡುವೆ ಯಾವುದೇ ರೀತಿಯ ಸಮನ್ವಯತೆ ಕೊರತೆಯಿಲ್ಲ. ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ಮಾಧ್ಯಮಗಳಲ್ಲಿ ಸುಧಾಕರ್ ಮತ್ತು ನನ್ನ ನಡುವೆ ಸಮನ್ವಯತೆ ಇಲ್ಲ, ಜಂಗೀಕುಸ್ತಿ ನಡೆಯುತ್ತಿದೆ ಎನ್ನುವ ಪದ ಬಳಸಿದ್ದಾರೆ. ಶಾಲೆಗಳನ್ನು ಆರಂಭಿಸುವ ವಿಚಾರದಲ್ಲಿ ಸುರೇಶ್ ಕುಮಾರ್ ಹಠ ಸಾಧಿಸುತ್ತಿದ್ದಾರೆ. ಮುಖ್ಯಮಂತ್ರಿಗಳಿಗೆ ಇಷ್ಟವಿಲ್ಲದಿದ್ದರೂ ಹಠ ಹಿಡಿದು ಶಾಲೆಗಳ ಆರಂಭಕ್ಕೆ ಸುರೇಶ್ ಕುಮಾರ್ ಮುಂದಾಗಿದ್ದಾರೆ ಎಂದು ವರದಿ ಮಾಡಲಾಗಿದೆ.
ಆದರೆ ಇದು ಯಾವ ಆಧಾರದಲ್ಲಿ ಈ ರೀತಿ ವರದಿ ಮಾಡುತ್ತಿದ್ದಾರೆ ಗೊತ್ತಿಲ್ಲ. ಇದೆಲ್ಲ ಸತ್ಯಕ್ಕೆ ದೂರವಾದ ವಿಚಾರ. ಶಾಲೆಗಳನ್ನು ಆರಂಭಿಸುವ ವಿಚಾರ ನಮ್ಮ ಸರ್ಕಾರಕ್ಕೆ ಪ್ರತಿಷ್ಠೆಯ ವಿಷಯವಲ್ಲ. ಇದು ಮಕ್ಕಳ ದೃಷ್ಟಿಯಿಂದ ಹಾಗೂ ಮಕ್ಕಳ ಭವಿಷ್ಯದ ಬದ್ಧತೆಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…