ಮಕ್ಕಳ ಶಾಲೆಯ ಶುಲ್ಕ ಕಟ್ಟಲು ಸಾಧ್ಯವಾಗಿಲ್ಲ ಎಂದು ಮಹಿಳೆಯೊಬ್ಬರು ಮಗಳ ಜತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 26 ವರ್ಷದ ಮಹಿಳೆ ಹಣದ ಕೊರತೆಯಿಂದಾಗಿ ಸಿಬಿಎಸ್ಇ ಶಾಲೆಗೆ ಕಳುಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನೊಂದು ಐದು ವರ್ಷದ ಮಗಳ ಜತೆಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಎರಡು ದಿನಗಳ ಹಿಂದೆ ಮಧ್ಯ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ನಿಲಂಗಾ ತಹಸಿಲ್ನ ಮಾಲೆಗಾಂವ್ನಲ್ಲಿ ಈ ಘಟನೆ ನಡೆದಿದೆ. ಔರಾದ್ ಶಹಾಜಾನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರನ್ನು ಭಾಗ್ಯಶ್ರೀ ವೆಂಕಟ್ ಹಲ್ಸೆ (26) ಮತ್ತು ಸಮೀಕ್ಷಾ ವೆಂಕಟ್ ಹಲ್ಸೆ (5) ಎಂದು ಗುರುತಿಸಲಾಗಿದೆ. ಮಹಿಳೆಯ ಪತಿಯು ಒಂದೂವರೆ ಎಕರೆ ಜಮೀನನ್ನು ಹೊಂದಿದ್ದು, ಕುಟುಂಬದ ಜೀವನೋಪಾಯವು ಮುಖ್ಯವಾಗಿ ಮೇಕೆಗಳನ್ನು ಮೇಯಿಸುವುದನ್ನು ಅವಲಂಬಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಭಾಗ್ಯಶ್ರೀ ತನ್ನ ಮಗ ಮತ್ತು ಮಗಳನ್ನು ಸಿಬಿಎಸ್ಇ-ಸಂಯೋಜಿತ ಶಾಲೆಗೆ ಕಳುಹಿಸಲು ಬಯಸಿದ್ದಳು, ಅದು ತನ್ನ ಗಂಡನ ಸಾಮರ್ಥ್ಯಕ್ಕೆ ಮೀರಿದೆ. ಇದರಿಂದ ಆಕೆ ಆಗಾಗ್ಗ ಖಿನ್ನತೆಗೆ ಒಳಗಾಗುತ್ತಿದ್ದಳು ಎಂದು ಆಕೆಯ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.
ಪತಿ ವೆಂಕಟ್ ಹಲ್ಸೆಗೆ ವಿಡಿಯೋ ಕಾಲ್ ಮಾಡಿ ಮಗಳ ಮುಖವನ್ನು ಕೊನೆಯ ಬಾರಿ ನೋಡುವಂತೆ ಹೇಳಿ ಬಾಲಕಿಯೊಂದಿಗೆ ಬಾವಿಗೆ ಹಾರಿದ್ದಾಳೆ.
ಬಳಿಕ ಸ್ಥಳೀಯರ ನೆರವಿನಿಂದ ಪೊಲೀಸರು ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…