ಮಕ್ಕಳ ಶಾಲೆಯ ಶುಲ್ಕ ಕಟ್ಟಲು ಸಾಧ್ಯವಾಗಿಲ್ಲ ಎಂದು ಮಹಿಳೆಯೊಬ್ಬರು ಮಗಳ ಜತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 26 ವರ್ಷದ ಮಹಿಳೆ ಹಣದ ಕೊರತೆಯಿಂದಾಗಿ ಸಿಬಿಎಸ್ಇ ಶಾಲೆಗೆ ಕಳುಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನೊಂದು ಐದು ವರ್ಷದ ಮಗಳ ಜತೆಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಎರಡು ದಿನಗಳ ಹಿಂದೆ ಮಧ್ಯ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ನಿಲಂಗಾ ತಹಸಿಲ್ನ ಮಾಲೆಗಾಂವ್ನಲ್ಲಿ ಈ ಘಟನೆ ನಡೆದಿದೆ. ಔರಾದ್ ಶಹಾಜಾನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರನ್ನು ಭಾಗ್ಯಶ್ರೀ ವೆಂಕಟ್ ಹಲ್ಸೆ (26) ಮತ್ತು ಸಮೀಕ್ಷಾ ವೆಂಕಟ್ ಹಲ್ಸೆ (5) ಎಂದು ಗುರುತಿಸಲಾಗಿದೆ. ಮಹಿಳೆಯ ಪತಿಯು ಒಂದೂವರೆ ಎಕರೆ ಜಮೀನನ್ನು ಹೊಂದಿದ್ದು, ಕುಟುಂಬದ ಜೀವನೋಪಾಯವು ಮುಖ್ಯವಾಗಿ ಮೇಕೆಗಳನ್ನು ಮೇಯಿಸುವುದನ್ನು ಅವಲಂಬಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಭಾಗ್ಯಶ್ರೀ ತನ್ನ ಮಗ ಮತ್ತು ಮಗಳನ್ನು ಸಿಬಿಎಸ್ಇ-ಸಂಯೋಜಿತ ಶಾಲೆಗೆ ಕಳುಹಿಸಲು ಬಯಸಿದ್ದಳು, ಅದು ತನ್ನ ಗಂಡನ ಸಾಮರ್ಥ್ಯಕ್ಕೆ ಮೀರಿದೆ. ಇದರಿಂದ ಆಕೆ ಆಗಾಗ್ಗ ಖಿನ್ನತೆಗೆ ಒಳಗಾಗುತ್ತಿದ್ದಳು ಎಂದು ಆಕೆಯ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.
ಪತಿ ವೆಂಕಟ್ ಹಲ್ಸೆಗೆ ವಿಡಿಯೋ ಕಾಲ್ ಮಾಡಿ ಮಗಳ ಮುಖವನ್ನು ಕೊನೆಯ ಬಾರಿ ನೋಡುವಂತೆ ಹೇಳಿ ಬಾಲಕಿಯೊಂದಿಗೆ ಬಾವಿಗೆ ಹಾರಿದ್ದಾಳೆ.
ಬಳಿಕ ಸ್ಥಳೀಯರ ನೆರವಿನಿಂದ ಪೊಲೀಸರು ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…