ಮಕ್ಕಳ ಶಾಲೆಯ ಶುಲ್ಕ ಕಟ್ಟಲು ಸಾಧ್ಯವಾಗಿಲ್ಲ ಎಂದು ಮಹಿಳೆಯೊಬ್ಬರು ಮಗಳ ಜತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 26 ವರ್ಷದ ಮಹಿಳೆ ಹಣದ ಕೊರತೆಯಿಂದಾಗಿ ಸಿಬಿಎಸ್ಇ ಶಾಲೆಗೆ ಕಳುಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನೊಂದು ಐದು ವರ್ಷದ ಮಗಳ ಜತೆಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಎರಡು ದಿನಗಳ ಹಿಂದೆ ಮಧ್ಯ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ನಿಲಂಗಾ ತಹಸಿಲ್ನ ಮಾಲೆಗಾಂವ್ನಲ್ಲಿ ಈ ಘಟನೆ ನಡೆದಿದೆ. ಔರಾದ್ ಶಹಾಜಾನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರನ್ನು ಭಾಗ್ಯಶ್ರೀ ವೆಂಕಟ್ ಹಲ್ಸೆ (26) ಮತ್ತು ಸಮೀಕ್ಷಾ ವೆಂಕಟ್ ಹಲ್ಸೆ (5) ಎಂದು ಗುರುತಿಸಲಾಗಿದೆ. ಮಹಿಳೆಯ ಪತಿಯು ಒಂದೂವರೆ ಎಕರೆ ಜಮೀನನ್ನು ಹೊಂದಿದ್ದು, ಕುಟುಂಬದ ಜೀವನೋಪಾಯವು ಮುಖ್ಯವಾಗಿ ಮೇಕೆಗಳನ್ನು ಮೇಯಿಸುವುದನ್ನು ಅವಲಂಬಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಭಾಗ್ಯಶ್ರೀ ತನ್ನ ಮಗ ಮತ್ತು ಮಗಳನ್ನು ಸಿಬಿಎಸ್ಇ-ಸಂಯೋಜಿತ ಶಾಲೆಗೆ ಕಳುಹಿಸಲು ಬಯಸಿದ್ದಳು, ಅದು ತನ್ನ ಗಂಡನ ಸಾಮರ್ಥ್ಯಕ್ಕೆ ಮೀರಿದೆ. ಇದರಿಂದ ಆಕೆ ಆಗಾಗ್ಗ ಖಿನ್ನತೆಗೆ ಒಳಗಾಗುತ್ತಿದ್ದಳು ಎಂದು ಆಕೆಯ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.
ಪತಿ ವೆಂಕಟ್ ಹಲ್ಸೆಗೆ ವಿಡಿಯೋ ಕಾಲ್ ಮಾಡಿ ಮಗಳ ಮುಖವನ್ನು ಕೊನೆಯ ಬಾರಿ ನೋಡುವಂತೆ ಹೇಳಿ ಬಾಲಕಿಯೊಂದಿಗೆ ಬಾವಿಗೆ ಹಾರಿದ್ದಾಳೆ.
ಬಳಿಕ ಸ್ಥಳೀಯರ ನೆರವಿನಿಂದ ಪೊಲೀಸರು ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…