ಶಾಲೆ ಪುನರಾರಂಭ : ಸಿಎಂ ನೇತೃತ್ವದಲ್ಲಿಶನಿವಾರ ಮಹತ್ವದ ಸಭೆ -Vishwanews24

Featured, ರಾಜ್ಯ ನ್ಯೂಸ್

ಶಾಲೆ ಪುನರಾರಂಭ : ಸಿಎಂ ನೇತೃತ್ವದಲ್ಲಿಶನಿವಾರ ಮಹತ್ವದ ಸಭೆ -Vishwanews24

ಬೆಂಗಳೂರು: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ತರಗತಿಗಳನ್ನು ಪುನರಾರಂಭಿಸುವುದಕ್ಕೆ ಸಂಬಂಧಿಸಿದಂತೆ ಮಹತ್ವದ ಸಭೆ ಶನಿವಾರ ನಡೆಯಲಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಶನಿವಾರ ಮಧ್ಯಾಹ್ನ ಕೃಷ್ಣಾದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ತರಗತಿಗಳ ಸ್ಥಿತಿ-ಗತಿ ನೋಡಿಕೊಂಡು ಉಳಿದ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆಯಲಿದೆ.ಪರಿಷ್ಕೃತ ಮಾದರಿಯ ವಿದ್ಯಾಗಮ ಯೋಜನೆ ಜಾರಿ ಸಂಬಂಧಿಸಿದಂತೆಯೂ ಚರ್ಚೆ ನಡೆಯಲಿದೆ.

ಶಾಲಾ-ಕಾಲೇಜು ತರಗತಿಯು ನಡೆಯುವ ಸಂಧರ್ಭ ಕಡ್ಡಾಯವಾಗಿ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚನೆ ನೀಡಬೇಕು” ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಅವರು ಪತ್ರ ಬರೆದಿದ್ದಾರೆ.ಈ ಹಿನ್ನೆಲೆ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯು ತರಗತಿಗಳು ಜ.1ರಿಂದ ಪ್ರಾರಂಭವಾಗುವುದು ಬಹುತೇಕ ಖಚಿತವಾಗುವ ಸಾಧ್ಯತೆ ಇದೆ.