ಬೆಂಗಳೂರು : 9 ರಿಂದ 12 ನೇ ತರಗತಿವರೆಗೆ ಪ್ರಾರಂಭ ಮಾಡುವ ಕುರಿತು ಇಂದು ಸಂಜೆ ಮಾರ್ಗಸೂಚಿ ಬಿಡುಗಡೆ ಮಾಡಲಿದ್ದು, ಮುಖ್ಯಮಂತ್ರಿಗಳು ಕೂಡ ಶಾಲೆ ಪ್ರಾರಂಭ ಘೋಷಿಸಿದ್ದಾರೆ. ಆಗಸ್ಟ್ 23 ರಿಂದ ಶಾಲೆಗಳು ಪ್ರಾರಂಭವಾಗುತ್ತವೆ ಆದರೆ ಒಂದೇ ಒಂದು ಸೋಂಕು ಕಂಡು ಬಂದರೂ ತರಗತಿ ನಿಲ್ಲಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ತರಗತಿ ಪ್ರಾರಂಭಕ್ಕೆ ಬೇಕಾದ ಎಲ್ಲಾ ಸಿದ್ದತೆ ಮಾಡಿಕೊಳುತ್ತಿದ್ದೇವೆ. ಎರಡು ಜಿಲ್ಲೆ ಹೊರತು ಪಡಿಸಿ ಉಳಿದ ಕಡೆ ಪ್ರಾರಂಭ ಮಾಡುತ್ತಿದ್ದೇವೆ. ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಮಕ್ಕಳಿಗೆ ಪೂರಕವಾದ ಮಾರ್ಗಸೂಚಿ ಪ್ರಕಟವಾಗಲಿದೆ” ಎಂದಿದ್ದಾರೆ.
ಇನ್ನು “ಮಕ್ಕಳಿಗೆ ಮಾಸ್ಕ್ ಕಡ್ಡಾಯವಾಗಿದ್ದು, ಮನೆಯಿಂದ ಬಂದು ಮನೆಗೆ ವಾಪಸಾಗುವವರೆಗೆ ಇರಬೇಕು. ಇದನ್ನು ಶಿಕ್ಷಕರು ನೋಡಿಕೊಳ್ಳುತ್ತಾರೆ. ಶಿಕ್ಷಕರಿಂದಲೂ ಶಾಲೆ ಪ್ರಾರಂಭಕ್ಕೆ ಬೆಂಬಲವಿದೆ” ಎಂದರು.
“ಕೊರೊನಾದ ಮೂರನೇ ಅಲೆ ಬರುತ್ತದೆ ಎಂಬ ತಜ್ಙರ ಸಲಹೆಗೆ ಹೆಚ್ಚಿನ ಒತ್ತು ಕೊಟ್ಟಿದ್ದೇವೆ. ಆಗಸ್ಟ್ 30 ರಂದು ತಜ್ಙರ ಸಮಿತಿ ಸಭೆ ನಡೆಯುತ್ತದೆ. ತಜ್ಙರ ಜೊತೆ ಸಿಎಂ ಸಭೆ ನಡೆಸುತ್ತಾರೆ” ಎಂದು ಹೇಳಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…