ಬೆಂಗಳೂರು : 9 ರಿಂದ 12 ನೇ ತರಗತಿವರೆಗೆ ಪ್ರಾರಂಭ ಮಾಡುವ ಕುರಿತು ಇಂದು ಸಂಜೆ ಮಾರ್ಗಸೂಚಿ ಬಿಡುಗಡೆ ಮಾಡಲಿದ್ದು, ಮುಖ್ಯಮಂತ್ರಿಗಳು ಕೂಡ ಶಾಲೆ ಪ್ರಾರಂಭ ಘೋಷಿಸಿದ್ದಾರೆ. ಆಗಸ್ಟ್ 23 ರಿಂದ ಶಾಲೆಗಳು ಪ್ರಾರಂಭವಾಗುತ್ತವೆ ಆದರೆ ಒಂದೇ ಒಂದು ಸೋಂಕು ಕಂಡು ಬಂದರೂ ತರಗತಿ ನಿಲ್ಲಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ತರಗತಿ ಪ್ರಾರಂಭಕ್ಕೆ ಬೇಕಾದ ಎಲ್ಲಾ ಸಿದ್ದತೆ ಮಾಡಿಕೊಳುತ್ತಿದ್ದೇವೆ. ಎರಡು ಜಿಲ್ಲೆ ಹೊರತು ಪಡಿಸಿ ಉಳಿದ ಕಡೆ ಪ್ರಾರಂಭ ಮಾಡುತ್ತಿದ್ದೇವೆ. ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಮಕ್ಕಳಿಗೆ ಪೂರಕವಾದ ಮಾರ್ಗಸೂಚಿ ಪ್ರಕಟವಾಗಲಿದೆ” ಎಂದಿದ್ದಾರೆ.
ಇನ್ನು “ಮಕ್ಕಳಿಗೆ ಮಾಸ್ಕ್ ಕಡ್ಡಾಯವಾಗಿದ್ದು, ಮನೆಯಿಂದ ಬಂದು ಮನೆಗೆ ವಾಪಸಾಗುವವರೆಗೆ ಇರಬೇಕು. ಇದನ್ನು ಶಿಕ್ಷಕರು ನೋಡಿಕೊಳ್ಳುತ್ತಾರೆ. ಶಿಕ್ಷಕರಿಂದಲೂ ಶಾಲೆ ಪ್ರಾರಂಭಕ್ಕೆ ಬೆಂಬಲವಿದೆ” ಎಂದರು.
“ಕೊರೊನಾದ ಮೂರನೇ ಅಲೆ ಬರುತ್ತದೆ ಎಂಬ ತಜ್ಙರ ಸಲಹೆಗೆ ಹೆಚ್ಚಿನ ಒತ್ತು ಕೊಟ್ಟಿದ್ದೇವೆ. ಆಗಸ್ಟ್ 30 ರಂದು ತಜ್ಙರ ಸಮಿತಿ ಸಭೆ ನಡೆಯುತ್ತದೆ. ತಜ್ಙರ ಜೊತೆ ಸಿಎಂ ಸಭೆ ನಡೆಸುತ್ತಾರೆ” ಎಂದು ಹೇಳಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…