ಬೆಂಗಳೂರು : 9 ರಿಂದ 12 ನೇ ತರಗತಿವರೆಗೆ ಪ್ರಾರಂಭ ಮಾಡುವ ಕುರಿತು ಇಂದು ಸಂಜೆ ಮಾರ್ಗಸೂಚಿ ಬಿಡುಗಡೆ ಮಾಡಲಿದ್ದು, ಮುಖ್ಯಮಂತ್ರಿಗಳು ಕೂಡ ಶಾಲೆ ಪ್ರಾರಂಭ ಘೋಷಿಸಿದ್ದಾರೆ. ಆಗಸ್ಟ್ 23 ರಿಂದ ಶಾಲೆಗಳು ಪ್ರಾರಂಭವಾಗುತ್ತವೆ ಆದರೆ ಒಂದೇ ಒಂದು ಸೋಂಕು ಕಂಡು ಬಂದರೂ ತರಗತಿ ನಿಲ್ಲಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ತರಗತಿ ಪ್ರಾರಂಭಕ್ಕೆ ಬೇಕಾದ ಎಲ್ಲಾ ಸಿದ್ದತೆ ಮಾಡಿಕೊಳುತ್ತಿದ್ದೇವೆ. ಎರಡು ಜಿಲ್ಲೆ ಹೊರತು ಪಡಿಸಿ ಉಳಿದ ಕಡೆ ಪ್ರಾರಂಭ ಮಾಡುತ್ತಿದ್ದೇವೆ. ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಮಕ್ಕಳಿಗೆ ಪೂರಕವಾದ ಮಾರ್ಗಸೂಚಿ ಪ್ರಕಟವಾಗಲಿದೆ” ಎಂದಿದ್ದಾರೆ.
ಇನ್ನು “ಮಕ್ಕಳಿಗೆ ಮಾಸ್ಕ್ ಕಡ್ಡಾಯವಾಗಿದ್ದು, ಮನೆಯಿಂದ ಬಂದು ಮನೆಗೆ ವಾಪಸಾಗುವವರೆಗೆ ಇರಬೇಕು. ಇದನ್ನು ಶಿಕ್ಷಕರು ನೋಡಿಕೊಳ್ಳುತ್ತಾರೆ. ಶಿಕ್ಷಕರಿಂದಲೂ ಶಾಲೆ ಪ್ರಾರಂಭಕ್ಕೆ ಬೆಂಬಲವಿದೆ” ಎಂದರು.
“ಕೊರೊನಾದ ಮೂರನೇ ಅಲೆ ಬರುತ್ತದೆ ಎಂಬ ತಜ್ಙರ ಸಲಹೆಗೆ ಹೆಚ್ಚಿನ ಒತ್ತು ಕೊಟ್ಟಿದ್ದೇವೆ. ಆಗಸ್ಟ್ 30 ರಂದು ತಜ್ಙರ ಸಮಿತಿ ಸಭೆ ನಡೆಯುತ್ತದೆ. ತಜ್ಙರ ಜೊತೆ ಸಿಎಂ ಸಭೆ ನಡೆಸುತ್ತಾರೆ” ಎಂದು ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…