Featured

ಶಾಸಕನಾಗಿ ಆಯ್ಕೆಯಾದ ಒಂದು ವರ್ಷದೊಳಗೆ ನಗರಕ್ಕೆ ಪ್ರತಿದಿನ 24 ಗಂಟೆ ನೀರು: ವೇದವ್ಯಾಸ ಕಾಮತ್‌

ಮಹಾನಗರ: ಶಾಸಕನಾಗಿ ಆಯ್ಕೆಯಾದ ಒಂದು ವರ್ಷದೊಳಗೆ ನಗರಕ್ಕೆ ಕುಡಿಯುವ ನೀರಿನ ಪೂರೈಕೆಗೆ ಹೊಸ ನೀತಿಯನ್ನು ರೂಪಿಸಿ ದಿನದ 24 ಗಂಟೆಯೂ ನೀರು ಲಭಿಸುವಂತೆ ಮಾಡಲು ಮೊದಲ ಆದ್ಯತೆ ನೀಡುವುದಾಗಿ ಮಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್‌ ಹೇಳಿದ್ದಾರೆ.

ನಗರದ ಟ್ಯಾಂಕ್‌ ಕಾಲೋನಿ, ನವಾಯತ್‌ ವಾರ್ಡ್‌, ಕಂದುಕ ಪ್ರದೇಶಗಳಲ್ಲಿ ಇಂದು ಮತಯಾಚನೆ ನಡೆಸಿದ ಅವರು ಎಡಿಬಿ ಸಾಲ ಯೋಜನೆಯಲ್ಲಿ ಅಗಿರುವ ನ್ಯೂನತೆಗಳನ್ನು ಸರಿಪಡಿಸಿ ಕುಡಿಯುವ ನೀರಿನ ಪೂರೈಕೆ ನಿರಂತರವಾಗಿರಲು ಗಮನ ನೀಡಲಾಗುವುದು ಎಂದರು. ನಗರದಲ್ಲಿ ಈಗ ಶೇ. 60ರಷ್ಟು ನೀರಿನ ಸೋರಿಕೆಯಾಗುತ್ತಿದೆ. ಅದನ್ನು ಶೇ.5ಕ್ಕೆ ಇಳಿಸಿದಾಗ ನಗರದ ಎಲ್ಲ ಜನತೆಗೆ ದಿನದ 24 ಗಂಟೆ ಕಾಲವೂ ನಿರಂತರ ನೀರು ಒದಗಿಸಲು ಸಾಧ್ಯವಾಗುವುದು. ಇದರಿಂದ ಪಾಲಿಕೆಯ ಅದಾಯವೂ ಹೆಚ್ಚಲಿದೆ ಎಂದು ತಿಳಿಸಿದರು.

ನಗರದಲ್ಲಿ ದಿನದಿಂದ ದಿನಕ್ಕೆ ಸಾರಿಗೆ, ಸಂಚಾರ ಸಮಸ್ಯೆ ಅಧಿಕವಾಗುತ್ತಿದೆ. ಇದಕ್ಕೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವ ಅಗತ್ಯವಿದೆ. ಮುಖ್ಯ ರಸ್ತೆಗಳನ್ನು ವ್ಯವಸ್ಥಿತ ಡ್ರೈನೇಜ್‌ನೊಂದಿಗೆ ಕಾಂಕ್ರೀಟ್‌ ರಸ್ತೆ ಮಾಡಲಾಗುವುದು. ಪಾದಚಾರಿ ರಸ್ತೆಗಳು, ಸೈಕಲ್‌ಟ್ರಾಫಿಕ್‌ ಗಳನ್ನು ನಿರ್ಮಿಸಲಾಗುವುದು. ಉಪರಸ್ತೆಗಳನ್ನು ಕೂಡಾ ವಿಸ್ತ ರ ಣೆಗೊಳಿಸಿ ಅಭಿವೃದ್ಧಿ ಪಡಿಸಲಾಗುವುದು. ಅಗತ್ಯಕ್ಕೆ ತಕ್ಕಂತೆ ಬಸ್‌ ಬೇಗಳನ್ನು ನಿರ್ಮಿಸಲಾಗುವುದು. ಪ್ರಥಮ ಹಂತದಲ್ಲಿ ಪ್ರಮುಖ ಜಂಕ್ಷನ್‌ಗಳನ್ನು ಅಭಿವೃದ್ದಿಪಡಿಸಲಾಗುವುದು ಎಂದು ವಿವರಿಸಿದರು.

ನಗರದಲ್ಲಿರುವ ತ್ಯಾಜ್ಯ ಸಂಸ್ಕರಣಾ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಎಲ್ಲೆಡೆ ಡ್ರೈನೇಜ್ ಸಮಸ್ಯೆ ಕಂಡು ಬರುತ್ತಿದೆ. ಇದರ ಜತೆಯಲ್ಲಿ ಮಳೆ ನೀರು ಹರಿಯುವ ತೋಡುಗಳನ್ನು ಕೂಡಾ ವೈಜ್ಞಾನಿಕ ರೀತಿಯಲ್ಲಿ ಅಭಿವೃದ್ದಿಪಡಿಸುವ ಅಗತ್ಯವಿದೆ. ಒಳಚರಂಡಿ ಇಲ್ಲದ ಕಡೆಗಳಲ್ಲಿ ವ್ಯವಸ್ಥಿತ ರೀತಿಯಲ್ಲಿ ಈ ವ್ಯವಸ್ಥೆಯನ್ನು ಕಲ್ಪಿಸುವ ಜರೂರಿ ಇದೆ. ವರ್ಷದೊಳಗೆ ಈ ಕಾರ್ಯಗಳನ್ನು ನಿರ್ವಹಿಸಲು ಎಲ್ಲ ಕ್ರಮ ಜರಗಿಸಲಾಗುವುದು ಎಂದು ಹೇಳಿದರು.

ಮಂಗಳೂರು ನಗರವನ್ನು ಸ್ವಚ್ಛ ನಗರ ಮಾದರಿ ನಗರವನ್ನಾಗಿ ರೂಪಿಸುವುದು ಬಹು ಅಗತ್ಯ. ಮಂಗಳೂರು ನಗರವನ್ನು ಹಸಿರು ನಗರಿಯನ್ನಾಗಿಸುವ ಮೂಲಕ ಈ ಕಡಲತಡಿಯನ್ನು ಮತ್ತಷ್ಟು ಸುಂದರೀಕರಣಕ್ಕೆ ಯೋಜನೆ ರೂಪಿಸಲಾಗುವುದು ಎಂದು ನುಡಿದರು.

ನಗರದಲ್ಲಿರುವ ಹಲವಾರು ಕರೆಗಳು ಪಾಳು ಬಿದ್ದಿವೆ. ಈ ಕರೆಗಳನ್ನು ಅಭಿವೃದ್ಧಿªಪಡಿಸಿದರೆ ನಗರಕ್ಕೆ ಪರ್ಯಾಯ ನೀರಿನ ಸೆಲೆ ದೊರೆತಂತಾಗುತ್ತದೆ. ನಗರದ ಪರಿಸರ ಹಾಗೂ ಸೌಂದರೀಕರಣಕ್ಕೂ ಈ ಕರೆಗಳ ಅಭಿವೃದ್ದಿ ಪೂರಕವಾಗಲಿವೆ ಎಂದು ಹೇಳಿದರು. ನೇತ್ರಾವತಿ ನದಿಗೆ ಬಂಟ್ವಾಳದಿಂದ ಹಿಡಿದು ಉಳ್ಳಾಲದವರೆಗೆ ಹಾಗೂ ಘಲ್ಗುಣಿ ನದಿಗೆ ಗುರುಪುರದಿಂದ ಹಿಡಿದು ಬಂದರುತನಕ ಕೊಳಚೆ ನೀರು ಸೇರುತ್ತಿದೆ.

ಇದು ಪರಿಸರದ ಮೇಲೆ ತೀವ್ರವಾದ ಪರಿಣಾಮ ಬೀರುವುದಲ್ಲದೆ ನಗರದ ಸ್ವಾಸ್ಥ್ಯವನ್ನು ಹಾಳುಗೆಡುತ್ತಿದೆ. ಇದನ್ನು ತಡೆಯುವುದು ಅತ್ಯಗತ್ಯವಾಗಿದೆ. ದೀರ್ಘ‌ಕಾಲಿನ ಯೋಜನೆಯೊಂದನ್ನು ಕೇಂದ್ರ ಸರಕಾರದ ನೆರವಿನಿಂದ ಜಾರಿಗೊಳಿಸಲು ಯೋಜನೆ ರೂಪಿಸುವುದಾಗಿ ಅವರು ವಿವರಿಸಿದರು.

 

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

2 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

2 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

3 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

3 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

3 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

4 hours ago