Featured

ಶಾಸಕರಾದ ಮಾತ್ರಕ್ಕೆ ಠಾಣೆಗೆ ಹೋಗಿ ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಬಹುದೇ? : ಹರೀಶ್ ಪೂಂಜಾಗೆ ಹೈಕೋರ್ಟ್ ತರಾಟೆ – vishwanews24

ಭಯೋತ್ಪಾದಕರನ್ನು ಪೊಲೀಸರು ಹಿಡಿದು ತಂದರೆ, ಆಗಲೂ ಪೊಲೀಸ್ ಠಾಣೆಗೆ ನುಗ್ತಿರಾ ? ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಭಯೋತ್ಪಾದಕರನ್ನು ಪೊಲೀಸರು ಹಿಡಿದು ತಂದರೆ, ಆಗಲೂ ಪೊಲೀಸ್ ಠಾಣೆಗೆ ನುಗ್ತಿರಾ? ಪೊಲೀಸರನ್ನು ಪ್ರಶ್ನೆ ಮಾಡುವಿರಾ? ಇದನ್ನೆಲ್ಲಾ ಒಪ್ಪಲು ಆಗುವುದಿಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಘಟನೆಗೆ ಸಂಬಂಧಿಸಿದಂತೆ ಹರೀಶ್ ಪೂಂಜಾರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ, ಶಾಸಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಪೊಲೀಸ್ ಠಾಣೆಗೆ ಏಕೆ ಹೋಗಿದ್ದು? ಶಾಸಕರಾದ ಮಾತ್ರಕ್ಕೆ ಠಾಣೆಗೆ ಹೋಗಿ ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಬಹುದೇ? ಎಂದು ಪ್ರಶ್ನಿಸಿದೆ.

ನಾಳೆ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ನೋಡಲು ಕೋರ್ಟ್ ಬಂದು ನಮ್ಮ ಮುಂದೆ ಕುಳಿತರೆ ಹೇಗೆ? ಆಗ ಏನು ಮಾಡುವುದು? ಶಾಸಕರು ಇರೋದು ಶಾಸನ ರೂಪಿಸಲು. ಅದರಂತೆ ಶಾಸನ ರಚನೆ ಮಾಡುವುದಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು. ಹೊರತುಪಡಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವುದಲ್ಲ ಎಂದು ಪೀಠ ತಿಳಿಸಿದೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

15 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

15 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

15 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

15 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

16 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

16 hours ago