ಬೆಂಗಳೂರು: ಭಯೋತ್ಪಾದಕರನ್ನು ಪೊಲೀಸರು ಹಿಡಿದು ತಂದರೆ, ಆಗಲೂ ಪೊಲೀಸ್ ಠಾಣೆಗೆ ನುಗ್ತಿರಾ? ಪೊಲೀಸರನ್ನು ಪ್ರಶ್ನೆ ಮಾಡುವಿರಾ? ಇದನ್ನೆಲ್ಲಾ ಒಪ್ಪಲು ಆಗುವುದಿಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಘಟನೆಗೆ ಸಂಬಂಧಿಸಿದಂತೆ ಹರೀಶ್ ಪೂಂಜಾರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ, ಶಾಸಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಪೊಲೀಸ್ ಠಾಣೆಗೆ ಏಕೆ ಹೋಗಿದ್ದು? ಶಾಸಕರಾದ ಮಾತ್ರಕ್ಕೆ ಠಾಣೆಗೆ ಹೋಗಿ ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಬಹುದೇ? ಎಂದು ಪ್ರಶ್ನಿಸಿದೆ.
ನಾಳೆ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ನೋಡಲು ಕೋರ್ಟ್ ಬಂದು ನಮ್ಮ ಮುಂದೆ ಕುಳಿತರೆ ಹೇಗೆ? ಆಗ ಏನು ಮಾಡುವುದು? ಶಾಸಕರು ಇರೋದು ಶಾಸನ ರೂಪಿಸಲು. ಅದರಂತೆ ಶಾಸನ ರಚನೆ ಮಾಡುವುದಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು. ಹೊರತುಪಡಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವುದಲ್ಲ ಎಂದು ಪೀಠ ತಿಳಿಸಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…