ಶಾಸಕರು ಇನ್ಮುಂದೆ ರೆಸಾರ್ಟ್‌ಗಳಲ್ಲಿ ಕಂಡರೆ ಮುಖಕ್ಕೆ ಸಗಣಿ ಎರಚುತ್ತೇವೆ : ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ – Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ರಾಯಚೂರು : ಶಾಸಕರು ಇನ್ಮುಂದೆ ರೆಸಾರ್ಟ್ ಗಳಲ್ಲಿ ಕಂಡರೆ ರೈತ ಸಂಘದ ಮಹಿಳಾ ಕಾರ್ಯಕರ್ತರು ಮುಖಕ್ಕೆ ಸಗಣಿ ಎರಚಿ ಪ್ರತಿಭಟನೆ ನಡೆಸುತ್ತಾರೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.

ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಅವರು, ರೆಸಾರ್ಟ್ ನಲ್ಲಿ ಶಾಸಕರ ನಡುವೆ ನಡೆದ ಗಲಾಟೆಯಿಂದ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮಾನ ಹರಾಜಾಗಿದೆ. ಇಂಥ  ಪುಂಡರಿಗೆ ಮತದಾರರೇ ಬುದ್ಧಿ ಕಲಿಸಬೇಕು. ವಿಧಾನಸೌಧ ಸೇರಿದಂತೆ ಅನೇಕ ಸಭಾಂಗಣಗಳಿದ್ದರೂ, ರೆಸಾರ್ಟಿನಲ್ಲಿ ಏನು ಚರ್ಚೆ ಮಾಡುತ್ತಾರೆ. ರಾಜಕೀಯಕ್ಕಾಗಿ ರೆಸಾರ್ಟ್ ಗಳಲ್ಲಿ ಸಭೆ ನಡೆಸಿದರೆ ಸಂಘಟನೆಯ ಕಾರ್ಯಕರ್ತರು ನುಗ್ಗಿ ಸಗಣಿ ಬಳಿಯಲಿದ್ದಾರೆ ಎಂದು ಹೇಳಿದರು.