ಬೆಂಗಳೂರು: ಶಾಸಕ ಜಮೀರ್ ಅಹಮದ್ ಮೊದಲು ಯಡಿಯೂರಪ್ಪ ಮನೆ ಹತ್ತಿರ ಹೋಗಿ ವಾಚ್ ಮ್ಯಾನ್ ಆಗಲಿ. ನಾನು ಬೇರೆಯವರಿಂದ ಪಾಠ ಕಲಿಯಬೇಕಿಲ್ಲ. ನಾನು ಓಲೈಕೆ ರಾಜಕಾರಣ ಮಾಡಿಕೊಂಡು ಬಂದಿಲ್ಲ ಎಂದು ಜಮೀರ್ ಅಹಮದ್ ಗೆ ಮಾಜಿ ಶಾಸಕ ರೋಷನ್ ಬೇಗ್ ತಿರುಗೇಟು ನೀಡಿದ್ದಾರೆ.
ರೋಷನ್ ಬೇಗ್ ಬಿಜೆಪಿ ಕಚೇರಿಯಲ್ಲಿ ಕಸಗುಡಿಸಿದರೆ 2023ರಲ್ಲಿ ಚುನಾವಣಾ ಟಿಕೆಟ್ ಸಿಗಬಹುದು ಎಂಬ ಜಮೀರ್ ಅಹಮದ್ ಟೀಕೆಗೆ ಬೇಗ್ ತಿರುಗೇಟು ನೀಡಿದರು.
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಾಟೆಯಲ್ಲಿ ಕಾಂಗ್ರೆಸ್ ನವರ ಕೈವಾಡ ಇದೆ. ಗಲಭೆಯಲ್ಲಿ ಕೆಲವರು ಅಮಾಯಕರು ಇರಬಹುದು. ಅಮಾಯಕರನ್ನು ಬಿಡಿ ಅಂತ ನಾನೇ ಹೇಳಿದ್ದೇನೆ. ಆದರೆ ಮೌಲಾನಾಗಳು ಗೋರಿ ಪಾಳ್ಯದಿಂದ ಯಾಕೆ ಇಲ್ಲಿಗೆ ಬರಬೇಕಿತ್ತು? ಟಿಪ್ಪು ನಗರದಿಂದ ಇಲ್ಲಿಗೆ ಗಲಾಟೆಗೆ ಹೊರಗಡೆಯಿಂದ ಯಾಕೆ ಬರಬೇಕಿತ್ತು ಎಂದು ಪ್ರಶ್ನಿಸಿದರು. ಬೆಂಗಳೂರು ಗಲಭೆಯಲ್ಲಿ ಕೆಲ ಅಮಾಯಕ ಮಂದಿಯೂ ಇರಬಹುದು. ಅಮಾಯಕರನ್ನು ಬಿಡಿ ಎಂದು ಖುದ್ದಾಗಿ ನಾನೇ ತಿಳಿಸಿದ್ದೆ. ಈ ಗಲಭೆಯಲ್ಲಿ ಕಾಂಗ್ರೆಸ್ಸಿಗರ ಕೈವಾಡವಿದೆ ಎಂದರು.
ನಾನು ಯಾವುದೇ ಎಸ್ ಡಿಪಿಐ ನ್ನು ಬೆಂಬಲಿಸಿಲ್ಲ. ನಾನು ಹೋರಾಟ ಮಾಡಿಕೊಂಡು ಬಂದವನು. ಹಿಂದೆ ಒಂದು ಗಲಾಟೆಯಲ್ಲಿ ರಮೇಶ್ ಕುಮಾರ್, ಸುದರ್ಶನ್, ಮಹದೇವಪ್ಪ ನನ್ನ ಜೀವ ಉಳಿಸಿದಾರೆ ಎಂದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…