Featured

ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಐಟಿ ದಾಳಿ -Vishwanews24

ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಐಟಿ ದಾಳಿ -Vishwanews24

ಬೆಂಗಳೂರು: ಕಾಂಗ್ರೆಸ್‌ ಶಾಸಕ, ಮಾಜಿ ಸಚಿವ ಜಮೀರ್‌ ಅಹ್ಮದ್‌ಖಾನ್‌ ಅವರಿಗೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಶಾಕ್‌ ನೀಡಿದ್ದಾರೆ.

ಬೆಳಗ್ಗೆ ಆರು ಗಂಟೆ ಸುಮಾರಿಗೆ ಜಮೀರ್ ಅವರ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಇನೋವಾ ಕಾರ್‌ನಲ್ಲಿ ಬಂದಿರುವ ಆರು ಮಂದಿ ಅಧಿಕಾರಿಗಳು ಜಮೀರ್ ಮನೆಯಲ್ಲಿ ಶೋಧ ನಡೆಸುತ್ತಿದ್ದಾರೆ. ದಾಳಿ ವೇಳೆ ಜಮೀರ್ ಅಹ್ಮದ್‌ಖಾನ್‌ ಅವರು ಮನೆಯಲ್ಲೇ ಇದ್ದರು ಎಂದು ತಿಳಿದು ಬಂದಿದೆ. ಬೆಂಗಳೂರಿನಲ್ಲಿರುವ ಜಮೀರ್ ಅವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ಇದರ ಜೊತೆಗೆ ಯುಬಿ ಸಿ.ಟಿಯಲ್ಲಿರುವ ಜಮೀರ್ ಅವರ ಫ್ಲ್ಯಾಟ್‌ ಮೇಲೂ ಅಧಿಕಾರಿಗಳು ಶೋಧ ನಡೆಸಿದ್ದಾರೆ.

ಐಟಿ ಅಧಿಕಾರಿಗಳು ಎರಡು ಕಾರ್‌ಗಳಲ್ಲಿ ಜಮೀರ್ ಅವರ ನಿವಾಸಕ್ಕೆ ಬಂದಿದ್ದು, ಸದ್ಯ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ನ್ಯಾಷನಲ್ಸ್‌ ಟ್ರಾವೆಲ್ಸ್ ಕಚೇರಿ, ಮನೆ, ಫ್ಲ್ಯಾಟ್‌ ಮೇಲೆ ವಿವಿಧ ತಂಡಗಳಲ್ಲಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಜಮೀರ್ ಅವರಿಗೆ ಸಂಬಂಧಿಸಿದ ವಿವಿಧ ವ್ಯವಹಾರಗಳ ಕುರಿತು ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಸದ್ಯ ಜಮೀರ್‌ ಅವರ ಮೊಬೈಲ್‌ ಫೋನ್‌ ಸಂಪರ್ಕ ಕಡಿತಗೊಂಡಿದೆ.

ಇತ್ತೀಚೆಗಷ್ಟೇ ತಮ್ಮ ಮಗಳ ಮದುವೆಯನ್ನು ಅದ್ಧೂರಿಯಾಗಿ ನಡೆಸಿದ್ದ ಜಮೀರ್, ಬೆಂಗಳೂರಿನಲ್ಲಿ ಭವ್ಯವಾದ ಮನೆಯನ್ನೂ ಕಟ್ಟಿಸಿದ್ದರು. ಶ್ರೀಲಂಕಾದಲ್ಲೂ ಜಮೀರ್ ಅವರ ವ್ಯವಹಾರಗಳಿದ್ದು, ಇನ್ನೊಂದೆಡೆ ಕಾರ್ಯಕ್ರಮಗಳಲ್ಲಿ ಸಹಾಯ ಕೇಳಿ ಬಂದವರಿಗೆ ಸ್ಥಳದಲ್ಲೇ ಹಣವನ್ನೂ ಜಮೀರ್ ಆಗಾಗ ಹಂಚುತ್ತಿದ್ದರು. ಬಡವರಿಗೆ ಹಣ ಹಂಚೋದು ಮೇಲ್ನೋಟಕ್ಕೆ ಜಮೀರ್ ಅವರ ಒಳ್ಳೆಯತನದಂತೆ ಕಂಡರೂ, ಇವರ ಕಾರ್ಯವೈಖರಿ ಐಟಿ ಅಧಿಕಾರಿಗಳ ಅನುಮಾನಕ್ಕೆ ಕಾರಣವಾಗಿತ್ತು. ಹೀಗಾಗಿ ಜಮೀರ್ ಅವರ ಚಲನವಲನಗಳ ಮೇಲೆ ಕಣ್ಣಿಟ್ಟಿರುವ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

2 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

4 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

4 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

5 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

5 hours ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

5 hours ago