Featured

ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಸಚಿವ ಮಂಕಾಳ ವೈದ್ಯರೊಂದಿಗೆ ಮಲ್ಪೆ ಮೀನುಗಾರರ ನಿಯೋಗದ ಸಭೆ – vishwanews24

ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಸಚಿವ ಮಂಕಾಳ ವೈದ್ಯರೊಂದಿಗೆ ಮಲ್ಪೆ ಮೀನುಗಾರರ ನಿಯೋಗದ ಸಭೆ

ಮಲ್ಪೆ ಮೀನುಗಾರಿಕಾ ಬಂದರಿನ ಹಲವು ಸಮಸ್ಯೆ ಹಾಗೂ ಮೀನುಗಾರಿಕೆ ಸಂಬಂಧಿಸಿದ ಹಲವು ತುರ್ತು ಬೇಡಿಕೆಗಳ ಬಗ್ಗೆ ಕರ್ನಾಟಕದ ಸರ್ಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರಾದ ಶ್ರೀ ಮಾಂಕಾಳ ವೈದ್ಯ ಅಧ್ಯಕ್ಷತೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಮಲ್ಪೆ ಮೀನುಗಾರ ಸಂಘದ ನಿಯೋಗ ಸಭೆ ನಡೆಸಿ ಸಚಿವರೊಂದಿಗೆ ಸಮಾಲೋಚನೆ ನಡೆಸಿದರು.

ಸಭೆಯಲ್ಲಿ ಮಲ್ಪೆ ಮಹಿಳಾ ಮೀನುಗಾರ ಸಂಘದ ಒಣ ಮೀನು ವ್ಯಾಪಾರಕ್ಕೆ ನಿವೇಶನ ಮಂಜೂರು, ಬಂದರಿನಲ್ಲಿ ಸುಗಮ ಮೀನುಗಾರಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ನಿರಂತರವಾಗಿ ಡ್ರೆಜ್ಜಿಂಗ್ ನಡೆಸಿ ಹೂಳು ತೆರವು, ಮೀನುಗಾರಿಕೆ ಅವಘಡ ಸಂದರ್ಭದಲ್ಲಿ ವಿಮಾ ಪರಿಹಾರ ಮೊತ್ತ ಬಿಡುಗಡೆ ಪ್ರಕ್ರಿಯೆ ನಿಯಮಾವಳಿ ಸರಳೀಕರಣ, ನಾಡದೋಣಿ ಹಾಗೂ ಯಾಂತ್ರೀಕೃತ ಬೋಟ್ ಗಳಿಗೆ ಸ್ಥಳದ ಕೊರತೆ ಹಿನ್ನೆಲೆ ಪ್ರಸ್ತಾವಿತ ನೂತನ ಜೆಟ್ಟಿ ನಿರ್ಮಾಣಕ್ಕೆ ಆದ್ಯತೆ, ಗೋವಾ ಮಹಾರಾಷ್ಟ್ರ ಕೇರಳ ಸಹಿತ ನೆರೆ ರಾಜ್ಯಗಳೊಂದಿಗೆ ಸಮನ್ವಯತೆ ಮೂಲಕ ಸುಗಮ ಮೀನುಗಾರಿಕೆ ಚಟುವಟಿಕೆ ನಡೆಸುವ ನಿಟ್ಟಿನಲ್ಲಿ ಏಕರೂಪ ಮೀನುಗಾರಿಕೆ ನೀತಿ ಜಾರಿ, 4ನೇ ಹಂತದ ಬಂದರು ಅಭಿವೃದ್ಧಿಗಾಗಿ ಟೆಬ್ಮಾ ಶಿಪ್ ಯಾರ್ಡ್ ಬಳಿಯ ಸ್ಥಳವನ್ನು ಮೀನುಗಾರಿಕೆ ಉದ್ದೇಶಕ್ಕೆ ಮೀಸಲಿರಿಸುವ ಬಗ್ಗೆ ಸಚಿವರಲ್ಲಿ ಮೀನುಗಾರರ ಪರವಾಗಿ ಶಾಸಕ ಯಶ್ ಪಾಲ್ ಸುವರ್ಣ ಸಚಿವರಿಗೆ ಮನವಿ ಮಾಡಿದರು.

ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಸುವರ್ಣ ಮಲ್ಪೆ ಮೀನುಗಾರಿಕೆ ಬಂದರಿನ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿದರು.

ನಿಯೋಗದ ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವ ಮಾಂಕಾಳ ವೈದ್ಯ ಮೀನುಗಾರ ಬೇಡಿಕೆ ಹಾಗೂ ಸಮಸ್ಯೆಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಆದ್ಯತೆಯ ಮೇರೆಗೆ ಪರಿಹರಿಸಲು ಬದ್ದನಿದ್ದು, ಶೀಘ್ರದಲ್ಲಿ ಮಲ್ಪೆ ಬಂದರಿಗೆ ಭೇಟಿ ನೀಡಿ ಮೀನುಗಾರಿಕೆ ಪೂರಕ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ವಹಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಮೀನುಗಾರಿಕೆ ಇಲಾಖೆ ನಿರ್ದೇಶಕರಾದ ದಿನೇಶ್ ಕಲ್ಲೇರ್, ಕೂಳೂರು ಮೊಗವೀರ ಸಂಘದ ಅಧ್ಯಕ್ಷರಾದ ಭರತ್ ಹಾಗೂ ಮಲ್ಪೆ ಯಾಂತ್ರಿಕ ಟ್ರಾಲ್ ಬೋಟ್ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಶ್ರೀ ರಾಮಚಂದ್ರ ಕುಂದರ್, ಪರ್ಸೀನ್ ಮೀನುಗಾರರ ಸಂಘದ ಅಧ್ಯಕ್ಷರಾದ ನಾಗರಾಜ ಸುವರ್ಣ, ಡೀಪ್ ಸೀ ಟ್ರಾಲ್ ಬೋಟ್ ಸಂಘದ ಅಧ್ಯಕ್ಷರಾದ ಸುಭಾಷ್ ಮೆಂಡನ್, ಮಹಿಳಾ ಮೀನುಗಾರರ ಸಂಘದ ಅಧ್ಯಕ್ಷರಾದ ಸುಮಿತ್ರಾ, ಮೀನುಗಾರರ ಸಂಘದ ಕಾರ್ಯದರ್ಶಿ ಜಗನ್ನಾಥ, ಮೀನುಗಾರ ಪ್ರಕೋಷ್ಠದ ಅಧ್ಯಕ್ಷರಾದ ಮಂಜುನಾಥ ಸಾಲ್ಯಾನ್, ಯಾಂತ್ರಿಕ ಟ್ರಾಲ್ ಸಹಕಾರಿ ಸಂಘದ ಉಪಾಧ್ಯಕ್ಷ ಪ್ರಕಾಶ್ ಬಂಗೇರ ಹಾಗೂ ಮೀನುಗಾರ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago