ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್ಟಿ ಸೋಮಶೇಖರ್ಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ. ಇಬ್ಬರನ್ನೂ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಇವರು ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ, ಅವರನ್ನು ಉಚ್ಚಾಟನೆ ಮಾಡುವ ನಿರ್ಧಾರವನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ತೆಗೆದುಕೊಂಡಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರವನ್ನು ಶಿವರಾಮ್ ಹೆಬ್ಬಾರ್ ಪ್ರತಿನಿಧಿಸುತ್ತಿದ್ದಾರೆ. ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ್ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಈ ಮೊದಲು ಇಬ್ಬರೂ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದರು. ಈ ಹಿಂದೆ ಇಬ್ಬರೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವರಾಮ್ ಹೆಬ್ಬಾರ್ ಅವರು ಕಾರ್ಮಿಕ ಸಚಿವರಾದರೆ, ಸೋಮಶೇಖರ್ ಅವರು ಸಹಕಾರ ಸಚಿವರಾಗಿದ್ದರು.
2023ರಲ್ಲಿ ಇಬ್ಬರೂ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬಂದರು. ಆದರೆ, ಈಗ ಶಿವರಾಮ್ ಹೆಬ್ಬಾರ್ ಹಾಗೂ ಸೋಮಶೇಖರ್ ಕಾಂಗ್ರೆಸ್ ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಕ್ಕಾಗಿ ಇಬ್ಬರೂ ಉಚ್ಚಾಟನೆ ಮಾಡಿ ಹೈ ಕಮಾಂಡ್ ಆದೇಶ ಹೊರಡಿಸಿದೆ.
ಈ ಮೊದಲು ಪಕ್ಷ ವಿರೋಧಿ ಆರೋಪದ ಮೇಲೆ ಬಸಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಈಗ ಇವರನ್ನೂ ಕೂಡ ಉಚ್ಚಾಟನೆ ಮಾಡಿ, ಪಕ್ಷ ವಿರೋಧಿ ಚಟುವಟಿಕೆ ಮಾಡುವವರಿಗೆ ಬಿಜೆಪಿ ಹೈಕಮಾಂಡ್ ಖಡಕ್ ಸಂದೇಶ ನೀಡಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…