ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್ಟಿ ಸೋಮಶೇಖರ್ಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ. ಇಬ್ಬರನ್ನೂ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಇವರು ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ, ಅವರನ್ನು ಉಚ್ಚಾಟನೆ ಮಾಡುವ ನಿರ್ಧಾರವನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ತೆಗೆದುಕೊಂಡಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರವನ್ನು ಶಿವರಾಮ್ ಹೆಬ್ಬಾರ್ ಪ್ರತಿನಿಧಿಸುತ್ತಿದ್ದಾರೆ. ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ್ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಈ ಮೊದಲು ಇಬ್ಬರೂ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದರು. ಈ ಹಿಂದೆ ಇಬ್ಬರೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವರಾಮ್ ಹೆಬ್ಬಾರ್ ಅವರು ಕಾರ್ಮಿಕ ಸಚಿವರಾದರೆ, ಸೋಮಶೇಖರ್ ಅವರು ಸಹಕಾರ ಸಚಿವರಾಗಿದ್ದರು.
2023ರಲ್ಲಿ ಇಬ್ಬರೂ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬಂದರು. ಆದರೆ, ಈಗ ಶಿವರಾಮ್ ಹೆಬ್ಬಾರ್ ಹಾಗೂ ಸೋಮಶೇಖರ್ ಕಾಂಗ್ರೆಸ್ ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಕ್ಕಾಗಿ ಇಬ್ಬರೂ ಉಚ್ಚಾಟನೆ ಮಾಡಿ ಹೈ ಕಮಾಂಡ್ ಆದೇಶ ಹೊರಡಿಸಿದೆ.
ಈ ಮೊದಲು ಪಕ್ಷ ವಿರೋಧಿ ಆರೋಪದ ಮೇಲೆ ಬಸಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಈಗ ಇವರನ್ನೂ ಕೂಡ ಉಚ್ಚಾಟನೆ ಮಾಡಿ, ಪಕ್ಷ ವಿರೋಧಿ ಚಟುವಟಿಕೆ ಮಾಡುವವರಿಗೆ ಬಿಜೆಪಿ ಹೈಕಮಾಂಡ್ ಖಡಕ್ ಸಂದೇಶ ನೀಡಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…