Featured

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆಡಿಎಸ್‌ನ ಗುಬ್ಬಿ ಶ್ರೀನಿವಾಸ್‌  – Vishwanews24

ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ್ ಇಂದು ರಾಜೀನಾಮೆ

ತುಮಕೂರು: ಗುಬ್ಬಿ ಕ್ಷೇತ್ರದ ಜೆಡಿಎಸ್  ಉಚ್ಛಾಟಿತ ಶಾಸಕ ಎಸ್‌ಆರ್ ಶ್ರೀನಿವಾಸ್ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರಾಜೀನಾಮೆ ಅಂಗೀಕಾರ ಆದ ಬಳಿಕ ಕಾಂಗ್ರೆಸ್ ಸೇರುತ್ತೇನೆ. ದೇವೇಗೌಡರು ನನ್ನನ್ನು ಮಗನಂತೆ ನೋಡಿಕೊಳ್ಳುತ್ತಿದ್ದರು. ದೇವೇಗೌಡರು (HD Devegowda), ಕುಮಾರಸ್ವಾಮಿ ನಾಯಕತ್ವದಲ್ಲಿ ಕೆಲಸ ಮಾಡಿದ್ದೇನೆ. ದೇವೇಗೌಡರು ಹೆಚ್ಚಿನ ಪ್ರೋತ್ಸಾಹ ಕೊಟ್ಟು ಮಗನಂತೆ ನೊಡಿಕೊಂಡರು. ಕುಮಾರಸ್ವಾಮಿ ಅವರು ಕೂಡ ಒಡಹುಟ್ಟಿದ ತಮ್ಮನ ಹಾಗೆ ನೊಡಿಕೊಂಡಿದ್ದಾರೆ. ಅದ್ಯಾವ ಸಂದರ್ಭಕ್ಕೊಸ್ಕರ ನನ್ನನ್ನು ಹೊರಹಾಕಿದ್ರೋ ಗೊತ್ತಿಲ್ಲ. ಆದರೂ ಇವತ್ತು ಭಾರವಾದ ಹೃದಯದಿಂದ, ನೋವಿನಿಂದ ಆ ಪಕ್ಷಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ ಎಂದು ಭಾವುಕರಾದರು.

2021ರ ಅಕ್ಟೋಬರ್‌ನಲ್ಲಿ ಕುಮಾರಸ್ವಾಮಿ ಬಂದು ಗುಬ್ಬಿಗೆ ಬೇರೆ ಅಭ್ಯರ್ಥಿ ಘೋಷಣೆ ಮಾಡಿದರು. ಅವತ್ತಿನಿಂದ ನನ್ನ ಮತ್ತು ಕುಮಾರಸ್ವಾಮಿ ಮಧ್ಯೆ ಅಂತರ ಜಾಸ್ತಿ ಆಯ್ತು. ಅವರು ನನ್ನ ಮೇಲೆ ಇಲ್ಲದ ಆರೋಪ ಮಾಡಿದರು. ದೇವೇಗೌಡರನ್ನು ಸೋಲಿಸಲು ನಾನು ಮುಖ್ಯ ಕಾರಣ ಅಂದರು. ಯಾವತ್ತೂ ನಾನೂ ಅಂತಹ ಪಕ್ಷ ದ್ರೋಹ ಮಾಡಿಲ್ಲ ಎಂದು ಹೇಳಿದರು.

ನಾನು ಮತ್ತು ಕುಮಾರಸ್ವಾಮಿ ನಡುವೆ ಭಾವನಾತ್ಮಕ ಸಂಬಂಧ ಇತ್ತು. ಅವರು ಯಾರ ಮಾತು ಕೇಳಿದ್ರೋ ಗೊತ್ತಿಲ್ಲ. ನಾನು ಪಕ್ಷ ಬಿಡಲ್ಲ ಅಂದರೂ ಅಧಿಕೃತವಾಗಿ ಅವರನೇ ಬೇರೆ ಅಭ್ಯರ್ಥಿ ಘೋಷಣೆ ಮಾಡಿದರು. ಅಡ್ಡ ಮತದಾನ ಮಾಡಿರುವ ಆರೋಪ ಮಾಡಿದರು. ಪಕ್ಷದಿಂದ ವಜಾಗೊಳಿಸಿದರು. ಇದುವರೆಗೂ ನನಗೆ ಸಹಕಾರ ಕೊಟ್ಟ ಜೆಡಿಎಸ್ ಪಕ್ಷದ ಎಲ್ಲಾ ಶಾಸಕರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು.

ನಾವು ಕುಟುಂಬದ ಸದಸ್ಯರಂತೆ ಕೆಲಸ ಮಾಡಿದ್ದೇವೆ. ಎಲ್ಲರೂ ನನ್ನ ಪಕ್ಷದಲ್ಲಿ ಉಳಿಸಿಕೊಳ್ಳಲು ಪ್ರಯತ್ನಪಟ್ಟರು. ಕುಮಾರಸ್ವಾಮಿ 20 ವರ್ಷ ತಮ್ಮನ ರೀತಿಯಲ್ಲಿ ನೋಡಿಕೊಂಡಿದ್ದಾರೆ. ರೇವಣ್ಣ ಅವರು ಅಭಿವೃದ್ಧಿ ಕೆಲಸಕ್ಕೆ ಸ್ಪಂದಿಸಿದ್ದಾರೆ. ನಾನು ಮಲಗಿದ್ದರೂ ಫೋನ್ ಮಾಡಿ ನಿನ್ನ ಕ್ಷೇತ್ರಕ್ಕೆ ಏನು ಬೇಕು ಎಂದು ಕೇಳಿ ಕೆಲಸ ಹಾಕಿಕೊಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು

Vishwa News 24

Recent Posts

ಉಡುಪಿ : ಪಿ.ಒ.ಪಿ / ರಾಸಾಯನಿಕ ಬಳಸಿ ಗಣೇಶ ವಿಗ್ರಹಗಳ ತಯಾರಿ, ಮಾರಾಟ ನಿಷೇಧ -vishwanews24

ಉಡುಪಿ ಪಿ.ಒ.ಪಿ / ರಾಸಾಯನಿಕ ಬಳಸಿ ಗಣೇಶ ವಿಗ್ರಹಗಳ ತಯಾರಿ, ಮಾರಾಟ ನಿಷೇಧ ಉಡುಪಿ : ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ…

10 hours ago

ಇಲ್ಲಿಂದ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ  :ವಿಚ್ಛೇದನ ಬೆನ್ನಲ್ಲೇ ವಿಜಯ್‌ ಪೋಸ್ಟ್ -vishwanews24

ಇಲ್ಲಿಂದ ಹೊಸ ಬದುಕಿನ ಪ್ರಯಾಣದತ್ತ ಹೆಜ್ಜೆ  :ವಿಚ್ಛೇದನ ಬೆನ್ನಲ್ಲೇ ವಿಜಯ್‌ ಪೋಸ್ಟ್ ಬೆಂಗಳೂರು: ನಟ, ನಿರ್ದೇಶಕ ದುನಿಯಾ ವಿಜಯ್‌  ಮತ್ತು…

12 hours ago

ಎಂಟು ಸ್ಪರ್ಧೆ, ಎಂಟೂ ಪ್ರಶಸ್ತಿ; ಅಂತಾರಾಷ್ಟ್ರೀಯ ಕಿರೀಟ ಗೆದ್ದ ಉಡುಪಿಯ ಸಚಿತ ರಾವ್ -vishwanews24

ಎಂಟು ಸ್ಪರ್ಧೆ, ಎಂಟೂ ಪ್ರಶಸ್ತಿ; ಅಂತಾರಾಷ್ಟ್ರೀಯ ಕಿರೀಟ ಗೆದ್ದ ಉಡುಪಿಯ ಸಚಿತ ರಾವ್ ಥೈಲ್ಯಾಂಡ್‌ನಲ್ಲಿ ನಡೆದ ‘ಜೂನಿಯರ್ ಮಾಡೆಲ್ ಇಂಟರ್‌ನ್ಯಾಷನಲ್–2026…

12 hours ago

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ; 2 ಕೋಟಿ ರೂ ಜೀವನಾಂಶಕ್ಕೆ ಆದೇಶ -vishwanews24

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ; 2 ಕೋಟಿ ರೂ ಜೀವನಾಂಶಕ್ಕೆ ಆದೇಶ ಬೆಂಗಳೂರು: ನಟ, ನಿರ್ದೇಶಕ ದುನಿಯಾ ವಿಜಯ್‌  ಮತ್ತು…

13 hours ago

ಉಡುಪಿ : ಅನ್ನಭಾಗ್ಯ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರಿಕೆ ಆರೋಪ;  ಮೂವರ ಬಂಧನ -vishwanews24

ಉಡುಪಿ : ಅನ್ನಭಾಗ್ಯ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರಿಕೆ ಆರೋಪ;  ಮೂವರ ಬಂಧನ ಉಡುಪಿ: ರಾಜ್ಯ ಸರಕಾರದ ಅನ್ನಭಾಗ್ಯದ…

13 hours ago

ಕೆಪಿಎಸ್‌ಸಿ ವಿಚಾರವಾಗಿ ಬಿಜೆಪಿ ಪಾದಯಾತ್ರೆ ಅವರ ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ಮುಚ್ಚಿಹಾಕುವ ಯತ್ನ :  ಸಿಎಂ ಡಿ.ಕೆ.ಶಿ -vishwanews24

ಕೆಪಿಎಸ್‌ಸಿ ವಿಚಾರವಾಗಿ ಬಿಜೆಪಿ ಪಾದಯಾತ್ರೆ ಅವರ ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ಮುಚ್ಚಿಹಾಕುವ ಯತ್ನ :  ಸಿಎಂ ಡಿ.ಕೆ.ಶಿ ಬೆಂಗಳೂರು :…

15 hours ago