Featured

ಶಾಸಕ ಹರೀಶ್ ಪೂಂಜಾ ಮೇಲೆ ಧಾಳಿಗೆ ಯತ್ನಿಸಿದ ಜಿಹಾದಿ ಶಕ್ತಿಗಳಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಲು ಸಿದ್ದ: ಯಶ್ ಪಾಲ್ ಸುವರ್ಣ ಆಕ್ರೋಶ – Vishwanews24

ಶಾಸಕ ಹರೀಶ್ ಪೂಂಜಾ ಮೇಲೆ ಧಾಳಿಗೆ ಯತ್ನಿಸಿದ ಜಿಹಾದಿ ಶಕ್ತಿಗಳಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಲು ಸಿದ್ದ: ಯಶ್ ಪಾಲ್ ಸುವರ್ಣ ಆಕ್ರೋಶ

ಬೆಳ್ತಂಗಡಿ ಶಾಸಕ ಪ್ರಬಲ ಹಿಂದುತ್ವವಾದಿ ಹರೀಶ್ ಪೂಂಜಾ ರವರ ಮೇಲೆ ತಲ್ವಾರ್ ಧಾಳಿ ನಡೆಸಿ ಜೀವ ಬೆದರಿಕಯೊಡ್ಡಿದ್ದ ಮತಾಂಧ ಜಿಹಾದಿ ಶಕ್ತಿಗಳಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಲು ಹಿಂದೂ ಕಾರ್ಯಕರ್ತರು ಸಿದ್ದರಿದ್ದೇವೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಮಾಜದಲ್ಲಿ ಆಂತರಿಕ ಭದ್ರತೆಗೆ ಧಕ್ಕೆ ತರಲು ಯತ್ನಿಸುತ್ತಿದ್ದ ಪಿ ಎಫ್ ಐ, ಸಿ ಎಫ್ ಐ ಸಂಘಟನೆಗಳ ಟೂಲ್ ಕಿಟ್ ಭಾಗವಾಗಿದ್ದ ಹಿಜಾಬ್ ವಿವಾದ ಸಂದರ್ಭದಲ್ಲಿ ಮತಾಂಧ ಶಕ್ತಿಗಳ ವಿರುದ್ಧ ಕಿಡಿಕಾರಿದ್ದ ಶಾಸಕ ಹರೀಶ್ ಪೂಂಜಾರವರ ಮೇಲೆ ಧಾಳಿಗೆ ಯತ್ನ ನಡೆಸುವ ಮೂಲಕ ಕರಾವಳಿ ಜಿಲ್ಲೆಯಲ್ಲಿ ಆತಂಕದ ವಾತಾವರಣ ನಿರ್ಮಿಸಲು ಜಿಹಾದಿ ಶಕ್ತಿಗಳು ಮುಂದಾಗಿದ್ದಾರೆ.
ಹಿಂದೂ ಪರ ರಾಷ್ಟ್ರೀಯವಾದಿ ನಾಯಕರ ಮೇಲೆ ನಿರಂತರ ಧಾಳಿ, ಜೀವ ಬೆದರಿಕೆ ಹಾಕಿ ಮಾನಸಿಕ ಸ್ಥೈರ್ಯ ಕುಗ್ಗಿಸಲು ಜಿಹಾದಿ ಶಕ್ತಿಗಳು ಮುಂದಾಗಿದ್ದು, ಕೇಂದ್ರ ಸರಕಾರ ಪಿ ಎಫ್ ಐ ಸಹಿತ 8 ಸಂಘಟನೆಗಳನ್ನು ನಿಷೇಧಿಸಿದ ಬಳಿಕ ಈ ಐಸಿಸ್ ಮನಸ್ಥಿತಿಯ ಮತಾಂಧ ಶಕ್ತಿಗಳು ತೆರೆಮರೆಯಲ್ಲಿ ಇಂತಹ ದುಷ್ಕೃತ್ಯದಲ್ಲಿ ತೊಡಗಿಸಿಕೊಂಡಿದೆ.
ರಾಷ್ಟ್ರೀಯವಾದಿ ಚಿಂತನೆಗಳ ಮೂಲಕ ರಾಜಕೀಯವಾಗಿ ಬೆಳೆದು ಬಂದು ಸದಾ ಜನಪರ ಹೋರಾಟದ ಮೂಲಕ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜಾ ರೊಂದಿಗೆ ಸಮಸ್ತ ಹಿಂದೂ ಸಮಾಜ ಜೊತೆಯಾಗಿ ನಿಲ್ಲಲಿದೆ.
ಹಿಂದುತ್ವದ ವಿಚಾರದಲ್ಲಿ ಎಂದಿಗೂ ರಾಜೀಯಾಗದ ಖಡಕ್ ನಿಲುವು ಹೊಂದಿರುವ ಶಾಸಕ ಹರೀಶ್ ಪೂಂಜಾ, ಪ್ರವೀಣ್ ನೆಟ್ಟಾರು ಹತ್ಯೆ ಸಂದರ್ಭದಲ್ಲೂ ಮತಾಂಧ ಶಕ್ತಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಹರೀಶ್ ಪೂಂಜಾರವರ ನಿಲುವು ದೇಶ ವಿರೋಧಿ ಸಂಘಟನೆಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ರಾಜ್ಯ ಹಾಗೂ ಕೇಂದ್ರ ಸರಕಾರ ಶಾಸಕ ಹರೀಶ್ ಪೂಂಜಾ ಮೇಲೆ ತಲ್ವಾರ್ ಧಾಳಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸಿ ಕೂಡಲೇ ಜಿಹಾದಿ ಶಕ್ತಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಶಾಸಕರಿಗೆ ಸೂಕ್ತ ಭದ್ರತೆ ಒದಗಿಸಿ, ನಿಷೇಧಿತ ಮತೀಯವಾದಿ ಸಂಘಟನೆಗಳ ಕಾರ್ಯಚಟವಟಿಕೆಗಳ ಬಗ್ಗೆ ತೀವ್ರ ನಿಗಾ ವಹಿಸಿ ತೆರೆಮರೆಯಲ್ಲಿ ಸಕ್ರಿಯವಾಗಿರುವ ಜಾಲವನ್ನು ಬಂಧಿಸಿ ಹೆಡೆಮುರಿ ಕಟ್ಟಿ ತಕ್ಕ ಶಾಸ್ತಿ ಮಾಡಬೇಕಿದೆ ಹಾಗೂ ನಿಷೇಧಿತ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದ ಪದಾಧಿಕಾರಿಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ ಚಲನವಲನ ಗಳ ಬಗ್ಗೆ ನಿಗಾ ವಹಿಸಲು ಗೃಹ ಇಲಾಖೆ ಮುಂದಾಗುವಂತೆ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago