ಉಡುಪಿ : ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು (ರಿ), ಕೇಂದ್ರ ಸಮಿತಿ ಹುಬ್ಬಳ್ಳಿ ಮತ್ತು ಶ್ರೀ ಜನಾರ್ದನ ಮಹಾಂಕಾಳಿ ದೇವಸ್ಥಾನ ಸಮಿತಿ, ಅಂಬಲಪಾಡಿ ಇವರ ಸಂಯುಕ್ತ ಶ್ರಯದಲ್ಲಿ ಸೆಪ್ಟಂಬರ್ 5 ಮಂಗಳವಾರದಂದು ಅಂಬಲಪಾಡಿಯಲ್ಲಿ ನಡೆಯಲಿರುವ ಶಿಕ್ಷಕ ಸಾಹಿತಿಗಳ ಆರನೇಯ ಸಮ್ಮೇಳನ ಸಂಭ್ರಮ ಕಾರ್ಯಕ್ರಮದಲ್ಲಿ ಉಡುಪಿಯ ಶೆಫಿನ್ಸ್ ಇಂಗ್ಲಿಷ್ ಅಕಾಡೆಮಿಯ ನಿರ್ದೇಶಕ ಮತ್ತು ಸ್ಪೋಕನ್ ಇಂಗ್ಲಿಷ್ ತರಬೇತುದಾರ ಶ್ರೀ ಮನೋಜ್ ಕಡಬ ಇವರು ಸ್ಪೋಕನ್ ಇಂಗ್ಲಿಷ್ ಕಲಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನ ವನ್ನು ಆರಂಭಿಸಿ, ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವ ಬಹುದೊಡ್ಡ ಕೆಲಸವನ್ನು ಮಾಡುತ್ತಿರುವ ಕಾರ್ಯಕ್ಕಾಗಿ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತಿದೆ.
“ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸರಕಾರಿ ಮತ್ತು ಅನುದಾನಿತ ಶಾಲೆಗಳ ಅತಿಥಿ ಹಾಗೂ ಗೌರವ ಶಿಕ್ಷಕಿಯರಿಗೆ ಹಾಗೂ ಮಕ್ಕಳಿಗೆ ವರ್ಷ ಪೂರ್ತಿ ಉಚಿತ ಸ್ಪೋಕನ್ ಇಂಗ್ಲಿಷ್ ತರಬೇತಿ ನೀಡುವ ಮೂಲಕ ಅವರೆಲ್ಲರ ಬಾಳಿಗೆ ದೀಪವಾಗುವ ಹಾಗೂ ಅಲ್ಲಿನ ಮಕ್ಕಳು ಇಂಗ್ಲಿಷ್ ನಲ್ಲಿ ಮಾತನಾಡುವುದನ್ನು ಕಾಣುವ ನೆರೆಮನೆಯ ಮಕ್ಕಳೂ ಕನ್ನಡ ಮಾಧ್ಯಮ ಶಾಲೆಗಳತ್ತ ಆಕರ್ಷಿತರಾಗಿ, ಶಾಲೆಗಳ ಮಕ್ಕಳ ಸಂಖ್ಯೆಯಲ್ಲಿ ಹೆಚ್ಚಳವಾಗಬಹುದೆಂಬ ನಿರೀಕ್ಷೆಯಲ್ಲಿ ಈ ಆಂದೋಲನವನ್ನು ಮಾಡುತ್ತಿದ್ದು, ಇಂತಹ ಕಾರ್ಯಕ್ಕಾಗಿ ನನ್ನನ್ನು ಶಿಕ್ಷಕರ ದಿನಾಚರೆಣೆಯಂದು ಸನ್ಮಾನಿಸುತ್ತಿರುವುದು ಸಂತಸ ತಂದಿದೆ. ಶಿಕ್ಷಣ ಇಲಾಖೆ ಉಪನಿರ್ದೇಶಕುಗಳ ಮತ್ತು ಶಿಕ್ಷಣಾಧಿಕಾರಿಗಳ ಅನುಮತಿಯೊಂದಿಗೆ ಮಾಡುತ್ತಿರುವ ಈ ಆಂದೋಲನಕ್ಕೆ ಆದರೆ ಶಾಲೆಗಳ ಶಿಕ್ಷಕರ, ಶಾಲಾಭಿವೃದ್ಧಿ ಮಂಡಳಿಯ, ಹಳೆ ವಿದ್ಯಾರ್ಥಿಗಳ ಮತ್ತು ಸಂಘ-ಸಂಸ್ಥೆಗಳ ಸಹಕಾರವಿದ್ದಲ್ಲಿ ಮಾತ್ರ ಈ ಕೆಲಸ ಸಾಧ್ಯ” ಎನ್ನುತ್ತಾರೆ ಮನೋಜ್ ಕಡಬ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…