Featured

ಶಿಕ್ಷಕರ ಹಾಗೂ ಸರಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಅವರ ಧ್ವನಿಯಾಗುತ್ತೇನೆ : ರಘುಪತಿ ಭಟ್ -vishwanews24

ಪದವೀಧರರ ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಹಾಗೂ ಕ್ರಿಯಾಶೀಲವಾಗಿ ಕೆಲಸ ಮಾಡುತ್ತೇನೆ..

ಪದವೀಧರರಿಗೆ ಉದ್ಯೋಗ – ಪದವೀಧರರಿಂದ ಉದ್ಯಮ – ಸಹಾಯ – ಸಹಕಾರ – ಸಂಪರ್ಕ ಇದು ನನ್ನ ಆಶಯ..

ವಿಧಾನ ಪರಿಷತ್ ನ ಒಳಗೆ ಮತ್ತು ಹೊರಗೆ ನಿಮ್ಮ ಧ್ವನಿಯಾಗುತ್ತೇನೆ..: ರಘುಪತಿ ಭಟ್

ಶಿವಮೊಗ್ಗ: ಜನತೆಯ ಆಶೀರ್ವಾದದಿಂದ ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ 3 ಬಾರಿ ಶಾಸಕನಾದ ಉಡುಪಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿರುತ್ತೇನೆ. ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ನನ್ನನ್ನು ಹರಸಿ ಆಶೀರ್ವದಿಸಿದರೆ ವಿಧಾನ ಸಭೆ ಸದಸ್ಯನಾಗಿ ಕೆಲಸ ನಿರ್ವಹಿಸಿದ ಕಾರ್ಯಾನುಭವದೊಂದಿಗೆ ಪ್ರಾಮಾಣಿಕವಾಗಿ ಹಾಗೂ ಕ್ರಿಯಾಶೀಲವಾಗಿ ಕೆಲಸ ಮಾಡಿ ಪದವೀಧರರ, ಶಿಕ್ಷಕರ ಹಾಗೂ ಸರಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಅವರ ಧ್ವನಿಯಾಗುತ್ತೇನೆ ಎಂದು ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಕೆ. ರಘುಪತಿ ಭಟ್ ಅವರು‌ ಹೇಳಿದರು.

ಶಿವಮೊಗ್ಗ ಹಾಗೂ ಶಿಕಾರಿಪುರದ ವಿವಿಧ ಭಾಗಗಳಲ್ಲಿ ಬುಧವಾರ ಮತದಾರರ ಸಭೆ ನಡೆಸಿ ಭರವಸೆ ನೀಡಿದರು.

ಪದವೀಧರರಿಗೆ ಉದ್ಯೋಗ – ಪದವೀಧರರಿಂದ ಉದ್ಯಮ – ಸಹಾಯ – ಸಹಕಾರ – ಸಂಪರ್ಕ ಇದು ನನ್ನ ಆಶಯವಾಗಿದೆ. ಎಲ್ಲಾ ಸರ್ಕಾರಿ ನೌಕರರ ಬೇಡಿಕೆಯಾದ ಎನ್.ಪಿ.ಎಸ್. (ನೂತನ ಪಿಂಚಣಿ ಯೋಜನೆ) ರದ್ದು ಪಡಿಸಿ ಒ.ಪಿ.ಎಸ್. (ಹಳೆ ಪಿಂಚಣಿ ಯೋಜನೆ) ಜಾರಿಗೆ ತರಲು ವಿಧಾನ ಪರಿಷತ್ ನ ಒಳಗೆ ಮತ್ತು ಹೊರಗೆ ನಿಮ್ಮ ಧ್ವನಿಯಾಗುತ್ತೇನೆ. ಹಾಗೂ ಶಿಕ್ಷಕರ ಸಮಸ್ಯೆಗಳು ಮತ್ತು ಬೇಡಿಕೆಗಳ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದು ಇದನ್ನು ಈಡೇರಿಸಲು ನಿಮ್ಮ ಧ್ವನಿಯಾಗುತ್ತೇನೆ ಎಂದ ಅವರು ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಮೊದಲ ಪ್ರಾಶಸ್ತ್ಯದ ಮತ ನೀಡಿ ಹರಿಸುವಂತೆ ಮನವಿ ಮಾಡಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago