ಶಿವಮೊಗ್ಗ: ಜನತೆಯ ಆಶೀರ್ವಾದದಿಂದ ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ 3 ಬಾರಿ ಶಾಸಕನಾದ ಉಡುಪಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿರುತ್ತೇನೆ. ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ನನ್ನನ್ನು ಹರಸಿ ಆಶೀರ್ವದಿಸಿದರೆ ವಿಧಾನ ಸಭೆ ಸದಸ್ಯನಾಗಿ ಕೆಲಸ ನಿರ್ವಹಿಸಿದ ಕಾರ್ಯಾನುಭವದೊಂದಿಗೆ ಪ್ರಾಮಾಣಿಕವಾಗಿ ಹಾಗೂ ಕ್ರಿಯಾಶೀಲವಾಗಿ ಕೆಲಸ ಮಾಡಿ ಪದವೀಧರರ, ಶಿಕ್ಷಕರ ಹಾಗೂ ಸರಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಅವರ ಧ್ವನಿಯಾಗುತ್ತೇನೆ ಎಂದು ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಕೆ. ರಘುಪತಿ ಭಟ್ ಅವರು ಹೇಳಿದರು.
ಶಿವಮೊಗ್ಗ ಹಾಗೂ ಶಿಕಾರಿಪುರದ ವಿವಿಧ ಭಾಗಗಳಲ್ಲಿ ಬುಧವಾರ ಮತದಾರರ ಸಭೆ ನಡೆಸಿ ಭರವಸೆ ನೀಡಿದರು.
ಪದವೀಧರರಿಗೆ ಉದ್ಯೋಗ – ಪದವೀಧರರಿಂದ ಉದ್ಯಮ – ಸಹಾಯ – ಸಹಕಾರ – ಸಂಪರ್ಕ ಇದು ನನ್ನ ಆಶಯವಾಗಿದೆ. ಎಲ್ಲಾ ಸರ್ಕಾರಿ ನೌಕರರ ಬೇಡಿಕೆಯಾದ ಎನ್.ಪಿ.ಎಸ್. (ನೂತನ ಪಿಂಚಣಿ ಯೋಜನೆ) ರದ್ದು ಪಡಿಸಿ ಒ.ಪಿ.ಎಸ್. (ಹಳೆ ಪಿಂಚಣಿ ಯೋಜನೆ) ಜಾರಿಗೆ ತರಲು ವಿಧಾನ ಪರಿಷತ್ ನ ಒಳಗೆ ಮತ್ತು ಹೊರಗೆ ನಿಮ್ಮ ಧ್ವನಿಯಾಗುತ್ತೇನೆ. ಹಾಗೂ ಶಿಕ್ಷಕರ ಸಮಸ್ಯೆಗಳು ಮತ್ತು ಬೇಡಿಕೆಗಳ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದು ಇದನ್ನು ಈಡೇರಿಸಲು ನಿಮ್ಮ ಧ್ವನಿಯಾಗುತ್ತೇನೆ ಎಂದ ಅವರು ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಮೊದಲ ಪ್ರಾಶಸ್ತ್ಯದ ಮತ ನೀಡಿ ಹರಿಸುವಂತೆ ಮನವಿ ಮಾಡಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…