Featured

ಶಿಕ್ಷಣಕ್ಕಿಂತ ಹಿಜಬ್ ಮುಖ್ಯವಲ್ಲ : ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಮ್ -Vishwanews24

ಧರ್ಮವೇ ಮುಖ್ಯವಾಗಿದ್ದರೆ ನಮ್ಮಲ್ಲಿ ಬೇಕಾದಷ್ಟು ಮುಸ್ಲಿಂ ಕಾಲೇಜುಗಳಿವೆ , ಅಲ್ಲಿ ಹಿಜಬ್‍ಗೆ ಅನುಮತಿ ನೀಡುತ್ತಾರೆ..

ಧರ್ಮ ಮನೆಯೊಳಗೆ ಇರಬೇಕು…

ಮನೆಯಿಂದ ಹೊರಗೆ ನಡೆಯುವಾಗ ನಾನೊಬ್ಬ ಭಾರತೀಯಳು ಎಂಬುದನ್ನು ನಾವು ಅರಿತುಕೊಳ್ಳಬೇಕು..

ಬೆಂಗಳೂರು: ಭಾರತ ಪ್ರತಿಯೊಬ್ಬರಿಗೂ ಧರ್ಮಗಳ ಆಚರಣೆಗೆ ಅವಕಾಶ ನೀಡಿದೆ. ಆದರೆ ಧರ್ಮ ಮನೆಯೊಳಗೆ ಇರಬೇಕು. ಮನೆಯಿಂದ ಹೊರಗೆ ನಡೆಯುವಾಗ ನಾನೊಬ್ಬ ಭಾರತೀಯಳು ಎಂಬುದನ್ನು ನಾವು ಅರಿತುಕೊಳ್ಳಬೇಕು ಎಂದು ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಮ್ ಹೇಳಿದ್ದಾರೆ.

ಕಳೆದ ಹಲವು ದಿನಗಳಿಂದ ಶಾಲಾ ಕಾಲೇಜುಗಳಲ್ಲಿನ ಹಿಜಬ್ ವಿವಾದದ ಕುರಿತು ಮಾತನಾಡಿದ ಸುರಯ್ಯ, ಶಿಕ್ಷಣಕ್ಕಿಂತ ಹಿಜಬ್ ಮುಖ್ಯವಲ್ಲ ಎಂದು ವಿದ್ಯಾರ್ಥಿಗಳಿಗೆ ತಿಳಿಸಲು ಪ್ರಯತ್ನಿಸಿದ್ದಾರೆ.

ವಿಡಿಯೋದಲ್ಲಿ

ನನ್ನ ಹಿಜಬ್ ನನ್ನ ಹಕ್ಕು. ಹಿಜಬ್ ನನ್ನ ಧರ್ಮದ ಪ್ರತೀಕ. ದೇಶ ನಮ್ಮ ಹಕ್ಕನ್ನು ಬಳಸಿಕೊಳ್ಳಲು ಮುಕ್ತವಾದ ಅವಕಾಶ ನೀಡಿದೆ. ಆದರೆ ನಮ್ಮ ಸಂವಿಧಾನ ನೀಡಿರುವ ಸ್ವತಂತ್ರವನ್ನು ನಾವು ದುರುಪಯೋಗ ಪಡಿಸಿಕೊಳ್ಳುತ್ತಿದ್ದೇವೆ ಎಂದರು.

ವಿದ್ಯಾರ್ಥಿಗಳಿಗೆ ದೇಶದ ಮೇಲಿನ ಅಭಿಮಾನ ಕಡಿಮೆಯಾಗಿರುವುದೇ ಇಂದು ಶಿಕ್ಷಣ ಸಂಸ್ಥೆಗಳಲ್ಲಿ ಧರ್ಮದ ವಿಚಾರಕ್ಕೆ ಪ್ರತಿಭಟನೆಗಳು ನಡೆಯಲು ಮುಖ್ಯ ಕಾರಣ. ಶಿಕ್ಷಣಕ್ಕಿಂತ ಬೇರೆ ದೊಡ್ಡ ಧರ್ಮ ಇಲ್ಲ. ಧರ್ಮಕ್ಕಿಂತಲೂ ಮುಖ್ಯ ನನ್ನ ದೇಶ ಎಂದು ಹೇಳಿದರು.

ವಿದ್ಯಾರ್ಥಿಗಳು ಇಂದು ಕಾಲೇಜಿಗೆ ಹಿಜಬ್ ಧರಿಸಿಕೊಂಡೇ ಹೋಗುತ್ತೇವೆ ಎಂದು ಪಟ್ಟು ಹಿಡಿದು ಕೂತಿದ್ದಾರೆ. ಶಾಲೆಯ ಆಡಳಿತ ಮಂಡಳಿಯವರು ಎಂದೂ ಬುರ್ಖಾ ಅಥವಾ ಹಿಜಬ್ ಧರಿಸಿ ಬರಬೇಡಿ ಎಂದು ಹೇಳಿಲ್ಲ. ಆದರೆ ತರಗತಿಯ ಒಳಗೆ ನೀವು ಹಿಜಬ್ ಧರಿಸಬೇಡಿ ಎಂದಿದೆ. ಏಕೆಂದರೆ ಬಹಳಷ್ಟು ವರ್ಷಗಳ ಹಿಂದೆಯೇ ಭಾರತೀಯ ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಎಂಬುದನ್ನು ಅಳವಡಿಸಲಾಗಿದೆ. ಸಮವಸ್ತ್ರ ಎಂಬ ಪದದಲ್ಲಿ ನಾವೆಲ್ಲರೂ ಸಮಾನರು ಎಂಬ ಅರ್ಥವಿದೆ. ಅದಕ್ಕಾಗಿ ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಬೇಕು ಎಂದರು.

ಇಲ್ಲಿ ಕೇಸರಿ ಶಾಲು ಅಥವಾ ಹಿಜಬ್‍ನ ಪ್ರಶ್ನೆಯಲ್ಲ. ನಾವೆಲ್ಲರೂ ಸರಿಸಮಾನರು. ಯಾವುದೇ ಜಾತಿ ಧರ್ಮಕ್ಕೆ ಒಳಗೊಂಡವರಲ್ಲ. ಶಿಕ್ಷಣವನ್ನು ಪಡೆಯಲು ಬಂದವರು ಶೈಕ್ಷಣಿಕವಾಗಿ ಎಲ್ಲರೂ ಸಮಾನರು. ಬಡವ ಶ್ರೀಮಂತ ಎಂಬ ಬೇದ ಭಾವವೂ ಇರಬಾರದು ಎಂಬ ಕಾರಣಕ್ಕೆ ಸಮವಸ್ತ್ರ ಜಾರಿಗೆ ಬಂದಿರುವುದು ಎಂದು ತಿಳಿಸಿದರು.

ಶಿಕ್ಷಣ ಪಡೆಯಲು ಬಂದವರು ರಾಜಕೀಯ ಪ್ರೇರಿತರಾಗಿ ಧರ್ಮವನ್ನು ಎತ್ತಿ ಹಿಡಿಯುತ್ತಿದ್ದೇವೆ ಎಂದರೆ ಇದು ಮುಂದಿನ 10 ವರ್ಷಗಳಲ್ಲಿ ಮಾರಕವಾಗುವ ಸಾಧ್ಯತೆ ಇದೆ. ಇಂದಿನ ವಿದ್ಯಾರ್ಥಿಗಳು ಎಂದರೆ ದೇಶದ ಭವಿಷ್ಯ. ದೇಶದ ಭವಿಷ್ಯವನ್ನು ಧರ್ಮದ ಹೆಸರಿನಲ್ಲಿ ಹಾಳು ಮಾಡುತ್ತ ಇದ್ದೇವೆ. ಹಿಜಬ್ ಧರಿಸಿ ಧರ್ಮ ಆಚರಣೆ ಮಾಡಿ. ಆದರೆ ಶಿಕ್ಷಣ ಸಂಸ್ಥೆಗಳಲ್ಲಿ ಧರ್ಮ ಆಚರಣೆ ಮಾಡುತ್ತೀರಿ ಎಂಬುದು ದೊಡ್ಡ ತಪ್ಪು ಎಂದರು.

ಕಲಿಯುವ ಆಸೆ ಹೊಂದಿದವರು ಕಲಿಯಿರಿ ಬದಲಿಗೆ ವಿಷಬೀಜವನ್ನು ಬಿತ್ತಬೇಡಿ. ಇಂದು ಮಕ್ಕಳನ್ನು ಶಾಲೆಗೆ ಕಳುಹಿಸುವುದು ಧರ್ಮವನ್ನು ಗೊತ್ತುಪಡಿಸಲು ಎಂಬಂತಹ ಪರಿಸ್ಥಿತಿ ಎದುರಾಗಿದೆ. ದೇಶದ ಭವಿಷ್ಯವನ್ನು ನಿರ್ಮಾಣ ಮಾಡಬೇಕು ಎಂಬ ಗುರಿ ವಿದ್ಯಾಥಿಗಳಲ್ಲಿ ಇಲ್ಲವಾಗಿದೆ ಎಂದು ಹೇಳಿದರು.

ಇದೀಗ ಶಿಕ್ಷಣ ಎಂಬುದು ಅನಿವಾರ್ಯ. ಅಲ್ಲಿ ಅನುಮತಿ ಇಲ್ಲದಿದ್ದರೆ ಹಿಜಬ್ ತೆಗೆದು ಕುಳಿತುಕೊಳ್ಳಿ. ನಿಮಗೆ ಧರ್ಮವೇ ಮುಖ್ಯವಾಗಿದ್ದರೆ ನಮ್ಮಲ್ಲಿ ಬೇಕಾದಷ್ಟು ಮುಸ್ಲಿಂ ಕಾಲೇಜುಗಳಿವೆ. ಅಲ್ಲಿ ಹಿಜಬ್‍ಗೆ ಅನುಮತಿ ನೀಡುತ್ತಾರೆ. ನೀವು ಅಲ್ಲಿಗೂ ಹೋಗಬಹುದು ಎಂದು ತಿಳಿಸಿದರು.

ಬಳೆ ಹಾಗೂ ಬೊಟ್ಟು ಇಟ್ಟುಕೊಂಡು ಬರುತ್ತಾರೆ ಎಂದು ಆರೋಪಿಸುತ್ತೀರಿ. ಆದರೆ ಅದು ಧರ್ಮಕ್ಕೆ ಸಂಬಂಧಪಟ್ಟದ್ದಲ್ಲ. ಅದು ಅಲಂಕಾರಿಕ ವಸ್ತು. ಇಂದು ಹಿಜಬ್ ಹಾಗೂ ಕೇಸರಿ ಶಲ್ಯದ ಬಗ್ಗೆ ಪ್ರತಿಭಟನೆ ನಡೆಯುತ್ತಿದೆ. ನಾಳೆ 5 ಬಾರಿ ನಮಾಜ್ ಮಾಡಲು ಅವಕಾಶ ನೀಡುವಂತೆ ಪ್ರತಿಭಟನೆ ನಡೆಸುತ್ತೀರಿ. ಇದೇ ರೀತಿ ಬೇಡಿಕೆಗಳು ಹೆಚ್ಚುತ್ತಲೇ ಹೋಗುತ್ತವೆ ಬದಲು ಕಡಿಮೆಯಾಗುವುದಿಲ್ಲ. ದಯವಿಟ್ಟು ನೀವು ತರಗತಿಯಲ್ಲಿ ಸಮಾನತೆಗೆ ಗೌರವ ಕೊಡಿ ಎಂದು ವಿನಂತಿಸಿದರು.

ಭಾರತದಲ್ಲಿ ನೀಡಿರುವಷ್ಟು ಮುಕ್ತ ಅವಕಾಶ ಬೇರೆ ಯಾವ ದೇಶಗಳಲ್ಲಿಯೂ ನೀಡಿಲ್ಲ. ಅಂತದ ದೇಶದಲ್ಲಿ ನಾವಿದ್ದ ಮೇಲೆ ಸಂವಿಧಾನಕ್ಕೆ ಗೌರವ ನೀಡುವುದು ಮುಖ್ಯ. ಶಿಕ್ಷಣ ಸಂಸ್ಥೆಗಳ ನೀತಿ ನಿಯಮಗಳಿಗೆ ನಾವು ಗೌರವ ನೀಡಬೇಕು. ರಾಜಕೀಯ ಪ್ರೇರಿತರಾಗಿ ವಿಷಬೀಜ ಬಿತ್ತುವುದು ಶುದ್ಧ ತಪ್ಪು ಎಂದು ತಿಳಿಸಿದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

21 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

21 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

22 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

22 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

24 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

24 hours ago