ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು ಸಿದ್ದರಾಮಯ್ಯ ಮನವಿ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವಿಟ್ಟರ್ ಮೂಲಕ ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

ಮಾಜಿ ತ್ರಿಭಾಷಾ ಸೂತ್ರದಡಿಯಲ್ಲಿ ಎಲ್ಲಾ ರಾಜ್ಯಗಳಲ್ಲಿ ಮಾತೃಭಾಷೆ, ಆಂಗ್ಲ ಭಾಷೆ ಜೊತೆಗೆ ಮೂರನೇ ಭಾಷೆಯಾಗಿ ಹಿಂದಿ ಅಳವಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಗೆ ತ್ರಿಭಾಷಾ ಸೂತ್ರ ಅಳವಡಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ದೇಶದ ಬಹುತೇಕ ಭಾಗಗಳಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.

ಕರ್ನಾಟಕದಲ್ಲೂ ಕೂಡಾ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತವಾಗುತ್ತಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು. ಇದು ಇನ್ನೊಂದು ಭಾಷೆಯ ಒತ್ತಾಯಪೂರ್ವಕ ಹೇರಿಕೆಯಂತಾಗಿ ಮಗುವಿನ ಕಲಿಕೆಯ ಶಕ್ತಿಯನ್ನು ಕುಂಠಿತಗೊಳಿಸುತ್ತದೆ.
ಹಿಂದಿ ಭಾಷಿಗರಲ್ಲದವರ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟಿರುವುದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ ಎಂಬುದು ನನ್ನ ಭಾವನೆ ಎಂದಿದ್ದಾರೆ.