ಬೆಂಗಳೂರು : ಶಾಲೆಗಳಲ್ಲಿ ಇಷ್ಟು ದಿನ 1 ನೇ ತರಗತಿಯಿಂದ 8 ನೇ ತರಗತಿಯವರೆಗೆ ಶಾಲಾ ವಿದ್ಯಾರ್ಥಿಗಳ ಕಡ್ಡಾಯ ಉತ್ತೀರ್ಣ ನಿಯಮಕ್ಕೆ ಬ್ರೇಕ್ ಹಾಕಿದ್ದು, ಕೇಂದ್ರ ಸರ್ಕಾರ ಕಾನೂನು ತಿದ್ದುಪಡಿ ಮಾಡಿದೆ.
1 ನೇ ತರಗತಿಯಿಂದ 8 ನೇ ತರಗತಿಯವರೆಗೆ ಓದದ ಮಕ್ಕಳನ್ನು ಪಾಸ್ ಮಾಡುವಂತೆ ಇದ್ದ ಶಿಕ್ಷಣ ಹಕ್ಕು ಕಾಯ್ದೆಗೆ ಕೇಂದ್ರ ಸರ್ಕಾರ ಹೊಸ ತಿದ್ದುಪಡಿ ತಂದಿದ್ದು, ಈ ಮೂಲಕ ಓದದ ಮಕ್ಕಳನ್ನು ಇನ್ಮುಂದೆ ಫೇಲ್ ಮಾಡಬಹುದಾಗಿದೆ. 2009 ರಲ್ಲಿ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಶಿಕ್ಷಣ ಹಕ್ಕು ಕಾಯ್ದೆ ಮೊನ್ನೆಯಷ್ಟೇ ಕೇಂದ್ರ ಸರ್ಕಾರ ತಿದ್ದುಪಡಿಗೆ ತಂದಿತ್ತು. ಈ ಹೊಸ ತಿದ್ದುಪಡಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಕೇಂದ್ರ ಸರ್ಕಾರ ಅಧಿಕೃತ ರಾಜ್ಯ ಪತ್ರ ಹೊರಡಿಸಿದೆ.
2009ರಲ್ಲಿ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಶಿಕ್ಷಣ ಹಕ್ಕು ಕಾಯ್ದೆ ಮೊನ್ನೆಯಷ್ಟೇ ಕೇಂದ್ರ ಸರ್ಕಾರ ತಿದ್ದುಪಡಿಗೆ ತಂದಿತ್ತು. ಈ ಹೊಸ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಇನ್ಮುಂದೆ ಪ್ರತಿ ವಿದ್ಯಾರ್ಥಿಗಳು ಪಾಸ್ ಆದರೆ ಮಾತ್ರ ಮುಂದಿನ ತರಗತಿಯಲ್ಲಿ ವ್ಯಾಸಂಗ ಮಾಡಬಹುದಾಗಿದೆ.
ವಿದ್ಯಾರ್ಥಿ ಮರು ಪರೀಕ್ಷೆಯಲ್ಲೂ ಫೇಲ್ ಆದರೆ ಇನ್ನೊಂದು ವರ್ಷ ಹಿಂದಿನ ತರಗತಿಯಲ್ಲೇ ವ್ಯಾಸಂಗ ಮುಂದುವರಿಸಬೇಕಾಗುತ್ತದೆ. 2009ರಿಂದ ಕಾಯ್ದೆ ಜಾರಿಗೆ ಬಂದಾಗಿನಿಂದ ದೇಶದಲ್ಲಿ ಶೈಕ್ಷಣಿಕ ಮೌಲ್ಯದ ಮಟ್ಟ ಕುಸಿಯುತ್ತಿತ್ತು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಮಹತ್ವದ ತಿದ್ದುಪಡಿಯನ್ನು ಜಾರಿಗೆ ತಂದಿದೆ ಎನ್ನಲಾಗಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…