ಬೆಂಗಳೂರು : ಶಾಲೆಗಳಲ್ಲಿ ಇಷ್ಟು ದಿನ 1 ನೇ ತರಗತಿಯಿಂದ 8 ನೇ ತರಗತಿಯವರೆಗೆ ಶಾಲಾ ವಿದ್ಯಾರ್ಥಿಗಳ ಕಡ್ಡಾಯ ಉತ್ತೀರ್ಣ ನಿಯಮಕ್ಕೆ ಬ್ರೇಕ್ ಹಾಕಿದ್ದು, ಕೇಂದ್ರ ಸರ್ಕಾರ ಕಾನೂನು ತಿದ್ದುಪಡಿ ಮಾಡಿದೆ.
1 ನೇ ತರಗತಿಯಿಂದ 8 ನೇ ತರಗತಿಯವರೆಗೆ ಓದದ ಮಕ್ಕಳನ್ನು ಪಾಸ್ ಮಾಡುವಂತೆ ಇದ್ದ ಶಿಕ್ಷಣ ಹಕ್ಕು ಕಾಯ್ದೆಗೆ ಕೇಂದ್ರ ಸರ್ಕಾರ ಹೊಸ ತಿದ್ದುಪಡಿ ತಂದಿದ್ದು, ಈ ಮೂಲಕ ಓದದ ಮಕ್ಕಳನ್ನು ಇನ್ಮುಂದೆ ಫೇಲ್ ಮಾಡಬಹುದಾಗಿದೆ. 2009 ರಲ್ಲಿ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಶಿಕ್ಷಣ ಹಕ್ಕು ಕಾಯ್ದೆ ಮೊನ್ನೆಯಷ್ಟೇ ಕೇಂದ್ರ ಸರ್ಕಾರ ತಿದ್ದುಪಡಿಗೆ ತಂದಿತ್ತು. ಈ ಹೊಸ ತಿದ್ದುಪಡಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಕೇಂದ್ರ ಸರ್ಕಾರ ಅಧಿಕೃತ ರಾಜ್ಯ ಪತ್ರ ಹೊರಡಿಸಿದೆ.
2009ರಲ್ಲಿ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಶಿಕ್ಷಣ ಹಕ್ಕು ಕಾಯ್ದೆ ಮೊನ್ನೆಯಷ್ಟೇ ಕೇಂದ್ರ ಸರ್ಕಾರ ತಿದ್ದುಪಡಿಗೆ ತಂದಿತ್ತು. ಈ ಹೊಸ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಇನ್ಮುಂದೆ ಪ್ರತಿ ವಿದ್ಯಾರ್ಥಿಗಳು ಪಾಸ್ ಆದರೆ ಮಾತ್ರ ಮುಂದಿನ ತರಗತಿಯಲ್ಲಿ ವ್ಯಾಸಂಗ ಮಾಡಬಹುದಾಗಿದೆ.
ವಿದ್ಯಾರ್ಥಿ ಮರು ಪರೀಕ್ಷೆಯಲ್ಲೂ ಫೇಲ್ ಆದರೆ ಇನ್ನೊಂದು ವರ್ಷ ಹಿಂದಿನ ತರಗತಿಯಲ್ಲೇ ವ್ಯಾಸಂಗ ಮುಂದುವರಿಸಬೇಕಾಗುತ್ತದೆ. 2009ರಿಂದ ಕಾಯ್ದೆ ಜಾರಿಗೆ ಬಂದಾಗಿನಿಂದ ದೇಶದಲ್ಲಿ ಶೈಕ್ಷಣಿಕ ಮೌಲ್ಯದ ಮಟ್ಟ ಕುಸಿಯುತ್ತಿತ್ತು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಮಹತ್ವದ ತಿದ್ದುಪಡಿಯನ್ನು ಜಾರಿಗೆ ತಂದಿದೆ ಎನ್ನಲಾಗಿದೆ.
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…
ಪಿಕಲ್ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್ನಲ್ಲಿ ಪತನ : ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…
ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ…