ಬೆಂಗಳೂರು: ವಿದ್ಯಾರ್ಥಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ವೇಳೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಭಾರೀ ಮುಜುಗರವಾಗಿದೆ.
ವಿಧಾನಸೌಧದಲ್ಲಿ ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ NEET, JEE, CET ಉಚಿತ ಕೋಚಿಂಗ್ ತರಬೇತಿಗೆ ಚಾಲನೆ ನೀಡುವ ಕಾರ್ಯಕ್ರಮ ಆಯೋಜನೆಗೊಂಡಿತ್ತು.
ಈ ವೇಳೆ ವಿದ್ಯಾರ್ಥಿಗಳ ಜೊತೆ ಮಧು ಬಂಗಾರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸುತ್ತಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದು ನೇರವಾಗಿಯೇ ಹೇಳಿದ್ದಾನೆ.
ಈ ಮಾತನ್ನು ಕೇಳಿಸಿಕೊಂಡ ಮಧು ಬಂಗಾರಪ್ಪ, ಯಾರೋ ಅದು ಹೇಳಿದ್ದು, ಏನಂತ ಹೇಳಿದ್ದು? ನಾನೇನು ಉರ್ದು ಮಾತಾಡಿದ್ನಾ? ಕನ್ನಡದಲ್ಲೇ ಮಾತನಾಡಿದ್ದು ಎಂದು ಗರಂ ಆದರು. ನಂತರ ಪಕ್ಕದಲ್ಲಿ ಕುಳಿತಿದ್ದ ಪದವಿ ಪೂರ್ವ ಕಾಲೇಜು ನಿರ್ದೇಶಕಿ ಸಿಂಧೂ ಬಿ ರೂಪೇಶ್ ಮತ್ತು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಅವರಲ್ಲಿ, ಯಾರು ನೋಡಿ ರೆಕಾರ್ಡ್ ಮಾಡಿ. ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.
ಮಾಧ್ಯಮಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳ ಸಮ್ಮುಖದಲ್ಲೇ ವಿದ್ಯಾರ್ಥಿ ನೇರವಾಗಿ ಹೇಳಿದ್ದರಿಂದ ತಕ್ಷಣವೇ ಗಲಿಬಿಲಿಗೊಂಡ ಮಧು ಬಂಗಾರಪ್ಪ, ಹೇ ಯಾರೋ ಅವನು ಹಾಗೆ ಮಾತನಾಡೋದು? ಯಾರು ಹಾಗೇ ಅಂದವರು ಡೀಟೇಲ್ಸ್ ತೆಗೆದುಕೊಳ್ಳಿ ಎಂದು ಗರಂ ಆಗಿ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…