ಶಿರಡಿ ಸಾಯಿಬಾಬಾಗೆ ಚಿನ್ನದ ಕಿರೀಟ ನೀಡಿದ ನಟಿ ಮಾಲಾಶ್ರೀ – vishwanews24
ಶಿರಡಿ ಸಾಯಿಬಾಬಾಗೆ ಚಿನ್ನದ ಕಿರೀಟ ನೀಡಿದ ನಟಿ ಮಾಲಾಶ್ರೀ
ಮಾಲಾಶ್ರೀ ಅವರ ಈ ಸಕ್ಸಸ್ ಹಿಂದೆ ಶಿರಡಿ ಸಾಯಿಬಾಬಾ ಅವರ ಆರ್ಶೀವಾದ ಅಚಲವಾಗಿದೆ. ಈ ಹಿನ್ನೆಲೆ ತಮ್ಮ ಪುತ್ರಿಯ ಮೊದಲ ಸಿನಿಮಾ ಶುರು ಮಾಡುವಾಗಲೂ ಬಾಬಾ ಆರ್ಶೀವಾದವನ್ನ ಪಡೆದಿದ್ದಾರೆ. ಇದೀಗ ಶಿರಡಿಗೆ ಭೇಟಿಕೊಟ್ಟು ಚಿನ್ನದ ಕಿರೀಟವನ್ನ ನೀಡಿದ್ದಾರೆ. ನಮ್ಮ ಕುಟುಂಬದ ಶಕ್ತಿ ಸಾಯಿಬಾಬಾ ಆಗಿದ್ದಾರೆ. ಹೀಗಾಗಿ, ನಮ್ಮ ಕಡೆಯಿಂದ ಒಂದು ಚಿಕ್ಕ ಉಡುಗೊರೆ ಎಂದಿದ್ದಾರೆ ಮಾಲಾಶ್ರೀ.
ಮಗಳು ಆರಾಧನಾ ರಾಮ್ ಹಾಗೂ ಪುತ್ರ ಆರ್ಯನ್ ಜೊತೆ ಶಿರಡಿಗೆ ಭೇಟಿ ನೀಡಿ ಬಂಗಾರದ ಕಿರೀಟವನ್ನ ಬಾಬಾಗೆ ಅರ್ಪಿಸಿದ್ದಾರೆ. ಇನ್ನು ಇದೇ ವೇಳೆ ಸಾಯಿಬಾಬಾ ಮೇಲಿನ ಭಕ್ತಿಯನ್ನ ನಟಿ ಮಾಲಾಶ್ರೀ ವಿವರಿಸಿದ್ದಾರೆ. ಮಾಲಾಶ್ರೀ ಅವರ ಪುತ್ರಿ ಕಾಟೇರ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದರು. ಇದೀಗ ಉಪೇಂದ್ರ ಅವರು ನಾಯಕರಾಗಿ ನಟಿಸುತ್ತಿರುವ ನೆಕ್ಸ್ಟ್ ಲೆವೆಲ್ ಸಿನಿಮಾದಲ್ಲಿ ನಟಿಸಲಿದ್ದಾರೆ.
