ಶಿರಾಡಿಘಾಟ್ : ಪೂರ್ಣಗೊಂಡ ಮಣ್ಣು ತೆರವು ಕಾರ್ಯ; ಏಕ ಮುಖ ಸಂಚಾರಕ್ಕೆ ಅವಕಾಶ – vishwanews24
ಶಿರಾಡಿಘಾಟ್ : ಪೂರ್ಣಗೊಂಡ ಮಣ್ಣು ತೆರವು ಕಾರ್ಯ; ಏಕ ಮುಖ ಸಂಚಾರಕ್ಕೆ ಅವಕಾಶ
ಸಕಲೇಶಪುರ: ಆರಿದ್ರಾ ಮಳೆ ಅಬ್ಬರ ಜೋರಾಗಿದ್ದು, ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ರ ಸಕಲೇಶಪುರ ತಾಲೂಕಿನ, ಮಾರನಹಳ್ಳಿ ಬಳಿ ಜೂ.25ರ ಮಧ್ಯರಾತ್ರಿ ಗುಡ್ಡಕುಸಿತ ಉಂಟಾಗಿತ್ತು, ಇದೀಗ ಮಣ್ಣು ತೆರವು ಕಾರ್ಯ ಪೂರ್ಣಗೊಳಿಸಿ ಏಕ ಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಶಿರಾಡಿಘಾಟ್ ರಸ್ತೆಯಲ್ಲಿ ಮಧ್ಯ ರಾತ್ರಿ 1 ಗಂಟೆಯಿಂದ ವಾಹನ ಸಂಚಾರ ಬಂದ್ ಆಗಿ ಸಾವಿರಾರು ಪ್ರಯಾಣಿಕರು ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಪರದಾಟ ನಡೆಸುವಂತಾಗಿತ್ತು.
ಭಾರೀ ಮಳೆ : ದ .ಕ, ಉಡುಪಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ – vishwanews24
ತಡರಾತ್ರಿ ಮರಗಳ ಸಮೇತ ರಸ್ತೆಗೆ ಅಡ್ಡಲಾಗಿ ಗುಡ್ಡ ಕುಸಿದಿದ್ದು, ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ- 75 ರಲ್ಲಿ ಸಕಲೇಶಪುರ ತಾಲೂಕು ವ್ಯಾಪ್ತಿಯ ಶಿರಾಡಿ ಘಾಟ್ ನಲ್ಲಿ ಭೂ ಕುಸಿತ ಸಂಭವಿಸಿರುವುದರಿಂದ ವಾಹನ ಸಂಚಾರ ಬಂದ್ ಆಗಿತ್ತು. ಇದೀಗ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದ್ದು ಸದ್ಯ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎನ್ನಲಾಗಿದೆ.
