ಹಾಸನ: ಕಳೆದ ಕೆಲವು ದಿನಗಳ ಆತಂಕದ ಬಳಿಕ ಶಿರಾಡಿಘಾಟ್ ಸಂಚಾರಕ್ಕೆ ಮುಕ್ತವಾಗಿದ್ದು, ದಿನದ 24 ಗಂಟೆಯೂ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.
ಮಲೆನಾಡಿನಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ವಾಹನಗಳ ಓಡಾಟಕ್ಕೆ ಜಿಲ್ಲಾಡಳಿತ ಅವಕಾಶ ಮಾಡಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಹಲವು ಭಾರಿ ಗುಡ್ಡ ಕುಸಿದಿದ್ದ ಸ್ಥಳದಲ್ಲಿ ಮಣ್ಣನ್ನು ತೆರವು ಮಾಡಿ ಆತಂಕ ನಿವಾರಣೆ ಮಾಡಲಾಗಿದೆ. ಈ ಹಿನ್ನಲೆ ವಾಹನಗಳು ಸಂಚರಿಸಲು ಅನುವು ಮಾಡಿಕೊಡಲಾಗಿದೆ.
ಹಲವು ವಾಹನಗಳ ಮೇಲೆ ಮಣ್ಣು ಕುಸಿದಿದ್ದು, ಗುಡ್ಡ ಕುಸಿದಿದ್ದರಿಂದ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಇದೀಗ ವಾಹನಗಳ ಓಡಾಟದ ಬಗ್ಗೆ ಸಕಲೇಶಪುರ ಎಸಿ ಶೃತಿ ಅವರು ಮಾಹಿತಿ ನೀಡಿದ್ದಾರೆ.
ಎರಡು ದಿನದಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಹೀಗಾಗಿ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ರೆಸ್ಕ್ಯೂ ಟೀಂ ನಿಯೋಜನೆ ಮಾಡಿದ್ದೇವೆ. ಪೊಲೀಸ್ ಅಧಿಕಾರಿಗಳು, ಎನ್ಹೆಚ್ ಟೀಂ ದಿನದ 24 ಗಂಟೆಯೂ ಸ್ಥಳದಲ್ಲಿರಲಿದೆ. ಯಾವುದೇ ಅವಘಡ ಸಂಭವಿಸದಂತೆ ಎಚ್ಚರ ವಹಿಸಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…