ಶಿರಾಡಿ: ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿಘಾಟ್ನಲ್ಲಿ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ವೊಂದು ಪಲ್ಟಿಯಾಗಿ ಟ್ಯಾಂಕರ್ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಸನಿಹದ ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿ ಗ್ಯಾಸ್ ಸೋರಿಕೆಯಾಗುತ್ತಿದೆ. ಮುನ್ನಚ್ಚರಿಕಾ ಕ್ರಮವಾಗಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದ್ದು, ನೂರಾರು ವಾಹನ ಸವಾರರು ಸೋರಿಕೆ ಸ್ಥಗಿತಗೊಳಲು ಕಾಯುತ್ತಿದ್ದಾರೆ.
ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಪೊಲೀಸರು ಕಳುಹಿಸುತ್ತಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ಪೊಲೀಸರು ತಲುಪಿದೆ. ಆದ್ರೆ ಸೋರಿಕೆ ಪರೀಕ್ಷೆಗೆ ಮಂಗಳೂರಿನ ಎಮ್. ಆರ್. ಪಿ. ಎಲ್ ನಿಂದ ತಜ್ಞರ ತಂಡ ಇನ್ನಷ್ಟೇ ಘಟನಾ ಸ್ಥಳಕ್ಕೆ ತಲುಪಬೇಕಿದೆ.
ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು ಸಕಲೇಶಪುರದಿಂದ ಹಾನುಬಾಳು ಮಾರ್ಗವಾಗಿ ಮೂಡಿಗೆರೆ ಮೂಲಕ ತೆರಳಲು ಸೂಚನೆ ನೀಡಲಾಗಿದೆ. ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ತೆರಳುವವರು ಗುಂಡ್ಯ ಬಿಸ್ಲೆ ಹಾಗೂ ಚಾರ್ಮಾಡಿ ಮಾರ್ಗವಾಗಿ ತೆರಳಲು ಸೂಚನೆ ನೀಡಲಾಗಿದೆ. ಪಲ್ಟಿಯಾದ ಗ್ಯಾಸ್ ಟ್ಯಾಂಕರ್ನಿಂದ ಭಾರಿ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗಿದೆ. ಹೀಗಾಗಿ ಗ್ಯಾಸ್ ಟ್ಯಾಂಕರ್ ತೆರವು ಕಾರ್ಯಾಚರಣೆ ಮುಗಿಯುವವರೆಗೂ ಎಲ್ಲಾ ವಾಹನಗಳ ಸಂಚಾರ ಬಂದ್ ಆಗಲಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…