ಸಕಲೇಶಪುರ: ತಾಲೂಕಿನ ಶಿರಾಡಿ ಘಾಟ್ ವ್ಯಾಪ್ತಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇನ್ನೋವಾ ಹಾಗೂ ಕಂಟೈನರ್ ನಡುವೆ ಢಿಕ್ಕಿ ಸಂಭವಿಸಿ ತಾಯಿ – ಮಗ ಸಾವನ್ನಪ್ಪಿ, ಇತರರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಂಗಳವಾರ(ಮೇ.21 ರಂದು) ನಡೆದಿದೆ.
ಕಾರಿನಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಪಾಣೆ ಮಂಗಳೂರು ಸಮೀಪದ ಬೊಂಡಲ ಗ್ರಾಮದ ಮೂಲದ ಶಬೀರ್ ಅಹಮ್ಮದ್ ಎಂಬುವರ ಪತ್ನಿ ಶಫಿಯ (48) ಹಾಗೂ ಅವರ ಪುತ್ರ ಶಫೀಕ್ (21) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರಿನಲ್ಲಿ ಮಕ್ಕಳು ಸೇರಿ 6 ಮಂದಿ ಇದ್ದರು ಎನ್ನಲಾಗಿದ್ದು, ಎಲ್ಲರಿಗೂ ಗಂಭೀರ ಸ್ವರೂಪದ ಗಾಯಗಳಾಗಿದೆ. ಸದ್ಯ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಾರನಹಳ್ಳಿ ಇಂದ ಸುಮಾರು ಎಂಟು ಕಿಲೋಮೀಟರ್ ದೂರದ ಶಿರಾಡಿ ಘಾಟಿನಲ್ಲಿ ಮಂಗಳವಾರ ಬೆಳಿಗ್ಗೆ 6.30ರ ಸಮಯದಲ್ಲಿ ಸಕಲೇಶಪುರದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು ಹಾಗೂ ಮಂಗಳೂರು ಕಡೆಯಿಂದ ಬರುತ್ತಿದ್ದ ಕಂಟೈನರ್ ಲಾರಿ ನಡುವೆ ಢಿಕ್ಕಿ ಸಂಭವಿಸಿ ಈ ದುರಂತ ಘಟನೆ ಸಂಭವಿಸಿದೆ.
ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…