ಮಂಗಳೂರು: ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಉಂಟಾಗಿದ್ದು. ಈ ಹಿನ್ನಲೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಇದು ಮಂಗಳೂರು ಬೆಂಗಳೂರು ನಡುವೆ ಸಂಚರಿಸುವ ಜನರಿಗೆ ಸಂಕಷ್ಟ ತಂದೊಡ್ಡಿದ್ದು, ಈ ಹಿನ್ನಲೆ ಮಂಗಳೂರು-ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸಂಚಾರ ಆರಂಭಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಶ್ಣವ್ ಅವರನ್ನು ಸೋಮವಾರ ನವದೆಹಲಿಯಲ್ಲಿ ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಿದ್ದಾರೆ. ‘ನನ್ನ ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವರು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ’ ಎಂದು ನಳಿನ್ ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು- ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಬಳಿ ಭೂಕುಸಿತ ಉಂಟಾಗಿದ್ದರಿಂದ ಜುಲೈ15ರಿಂದ ಶಿರಾಡಿ ಘಾಟಿಯಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಕೆಲ ಷರತ್ತಿನೊಂದಿಗೆ ಕಾರು, ಜೀಪು, ಸೇರಿದಂತೆ ಸಣ್ಣ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…