ಕಾರವಾರ: ಶಿರೂರು ಭೂ ಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ಬಿದ್ದ ಟ್ರಕ್ ಕೊನೆಗೂ ಪತ್ತೆಯಾಗಿದೆ.
ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಗಂಗಾವಳಿ ನದಿಗೆ ಬಿದ್ದಿತ್ತು.
ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಇದ್ದ ಕಾರಣ ಟ್ರಕ್ ಪತ್ತೆ ಮಾಡಲು ಕಷ್ಟವಾಗಿತ್ತು. ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಟ್ರಕ್ ಪತ್ತೆಗೆ ನಿರಂತರ ಪ್ರಯತ್ನ ನಡೆಸುತ್ತಿದ್ದರು.
ಈಗ ಟ್ರಕ್ ಗುಡ್ಡ ಕುಸಿತಗೊಂಡ ಜಾಗದ ಬಳಿಯೇ ಸಿಕ್ಕಿ ಬಿದ್ದಿದೆ. ಟ್ರಕ್ ಮೇಲೆ ಸಾಕಷ್ಟು ಕಲ್ಲು ಮತ್ತು ಮಣ್ಣುಗಳಿವೆ. ಹೀಗಾಗಿ ಮಣ್ಣು ಮತ್ತು ಕಲ್ಲುಗಳನ್ನು ತೆಗೆದು ಟ್ರಕ್ ಮೇಲಕ್ಕೆ ಎತ್ತಲು ಸಿದ್ಧತೆ ನಡೆಯುತ್ತಿದೆ.
ಜುಲೈ 16 ರಂದು ಭೂಕುಸಿತ ಸಂಭವಿಸಿದಾಗ ಅರ್ಜುನ್ ಮರ ತುಂಬಿಸಿಕೊಂಡು ಟ್ರಕ್ನಲ್ಲಿ ಕೋಝಿಕ್ಕೋಡ್ ಕಡೆಗೆ ಹೋಗುತ್ತಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…