ಉಡುಪಿ,: ಶಿರೂರು ಮಠದ ಹಿಂದಿನ ಪೀಠಾಧಿಪತಿ ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಆದಯ ತೆರಿಗೆ ಇಲಾಖೆಯಿದ 17.34 ಕೋಟಿ ರೂ.ತೆರಿಗೆ ಮತ್ತು ಬಡ್ಡಿ ಪಾವತಿಸುವಂತೆ ನೋಟಿಸ್ ನೀಡಿದ್ದಾರೆ. ಅಲ್ಲದೆ ಮಠಕ್ಕೆ ಬರುತ್ತಿದ್ದ ವಾಣಿಜ್ಯ ಸಂಕೀರ್ಣದಿಂದ ಬರುತ್ತಿದ್ದ ಆದಾಯವನ್ನು ತೆರಿಗೆ ಇಲಾಖೆ ಮುಟ್ಟುಗೋಲು ಹಾಕಿದೆ ಎಂದು ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಭಾನುವಾರ ಶಿರೂರು ಮಠದಲ್ಲಿ ನಡೆದ ಶಿಷ್ಯ ವರ್ಗದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮನವರಿಕೆ ಮಾಡಿ ವಿನಂತಿಸಿದ ಬಳಿಕ ಬಳಿಕ ಶೇ.80ರಷ್ಟು ಮೊತ್ತಕ್ಕೆ ತಡೆ ಲಭಿಸಿದ್ದು, ಬಳಿಕ ಶೇ.20ರಷ್ಟು ಮೊತ್ತವನ್ನು ತುರ್ತಾಗಿ ಪಾವತಿಸಲು ಸೂಚಿಸಿದ್ದಾರೆ ಎಂದರು. .ಶಿರೂರು ಮಠ ಬೀಳುವ ಸ್ಥಿತಿಯಲ್ಲಿದ್ದು, ವಾಣಿಜ್ಯ ಸಂಕೀರ್ಣದಿಂದ ಬರುತ್ತಿದ್ದ ಆದಾಯದಿಂದ 25 ಲಕ್ಷ ಖರ್ಚು ಮಾಡಿ ಜೀರ್ಣೋದ್ದಾರ ಮಾಡಿದ್ದೇವೆ. ಮಠದ ಆದಾಯ ಕಡಿಮೆ ಇದೆ. ಮಠದ ಬ್ಯಾಂಕ್ ಖಾತೆಯಲ್ಲಿದ್ದ ೧೦ ಲಕ್ಷ ರೂಪಾಯಿಯನ್ನು ಬ್ಯಾಂಕ್ ನವರು ಮುಟ್ಟುಗೋಲು ಹಾಕಿದ್ದಾರೆ ಎಂದರು.
ಬಳಿಕ ಮಾತನಾಡಿದ ಸೋದೆ ಮಠ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ರತ್ನಕುಮಾರ್, ಶಿರೂರು ಮಠ ಶೇ.30 ಮತ್ತು ಖಾಸಗಿ ಕಂಪನಿ ಶೇ.70ರ ಒಡಬಂಡಿಕೆಯಲ್ಲಿ ಕನಕ ಮಾಲ್ ನಿರ್ಮಾಣಕ್ಕೆ ಹಿಂದಿನ ಸ್ವಾಮೀಜಿ ನಿರ್ಧರಿಸಿದ್ದರು. ಇದಕ್ಕೆ ಕಾರ್ಪೊರೇಶನ್ ಬ್ಯಾಂಕ್ ಮಣಿಪಾಲ ಶಾಖೆಯಲ್ಲಿ 25 ಕೋಟಿ ರೂ.ಸಾಲ ಮಾಡಲಾಗಿದ್ದು, 15 ಕೋಟಿ ರೂ.ಪಡೆದು ಕಟ್ಟಡ ನಿರ್ಮಿಸಲಾಗಿದೆ. ಶೀಘ್ರದಲ್ಲೇ ಬ್ಯಾಂಕ್ ಸಿಎಂಡಿ ಅವರನ್ನು ಭೇಟಿ ಮಾಡಲಾಗುವುದು. ಜತೆಗೆ ಅಂಗಡಿ ಪಡೆಯಲು ಮುಂಗಡ ಪಾವತಿಸಿದ 10 ಜನರಿಗೂನ್ಯಾಯ ಒದಗಿಸಲು ಮಠ ಬದ್ಧವಾಗಿದೆ ಎಂದು ತಿಳಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…