ಉಡುಪಿ,: ಶಿರೂರು ಮಠದ ಹಿಂದಿನ ಪೀಠಾಧಿಪತಿ ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಆದಯ ತೆರಿಗೆ ಇಲಾಖೆಯಿದ 17.34 ಕೋಟಿ ರೂ.ತೆರಿಗೆ ಮತ್ತು ಬಡ್ಡಿ ಪಾವತಿಸುವಂತೆ ನೋಟಿಸ್ ನೀಡಿದ್ದಾರೆ. ಅಲ್ಲದೆ ಮಠಕ್ಕೆ ಬರುತ್ತಿದ್ದ ವಾಣಿಜ್ಯ ಸಂಕೀರ್ಣದಿಂದ ಬರುತ್ತಿದ್ದ ಆದಾಯವನ್ನು ತೆರಿಗೆ ಇಲಾಖೆ ಮುಟ್ಟುಗೋಲು ಹಾಕಿದೆ ಎಂದು ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಭಾನುವಾರ ಶಿರೂರು ಮಠದಲ್ಲಿ ನಡೆದ ಶಿಷ್ಯ ವರ್ಗದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮನವರಿಕೆ ಮಾಡಿ ವಿನಂತಿಸಿದ ಬಳಿಕ ಬಳಿಕ ಶೇ.80ರಷ್ಟು ಮೊತ್ತಕ್ಕೆ ತಡೆ ಲಭಿಸಿದ್ದು, ಬಳಿಕ ಶೇ.20ರಷ್ಟು ಮೊತ್ತವನ್ನು ತುರ್ತಾಗಿ ಪಾವತಿಸಲು ಸೂಚಿಸಿದ್ದಾರೆ ಎಂದರು. .ಶಿರೂರು ಮಠ ಬೀಳುವ ಸ್ಥಿತಿಯಲ್ಲಿದ್ದು, ವಾಣಿಜ್ಯ ಸಂಕೀರ್ಣದಿಂದ ಬರುತ್ತಿದ್ದ ಆದಾಯದಿಂದ 25 ಲಕ್ಷ ಖರ್ಚು ಮಾಡಿ ಜೀರ್ಣೋದ್ದಾರ ಮಾಡಿದ್ದೇವೆ. ಮಠದ ಆದಾಯ ಕಡಿಮೆ ಇದೆ. ಮಠದ ಬ್ಯಾಂಕ್ ಖಾತೆಯಲ್ಲಿದ್ದ ೧೦ ಲಕ್ಷ ರೂಪಾಯಿಯನ್ನು ಬ್ಯಾಂಕ್ ನವರು ಮುಟ್ಟುಗೋಲು ಹಾಕಿದ್ದಾರೆ ಎಂದರು.
ಬಳಿಕ ಮಾತನಾಡಿದ ಸೋದೆ ಮಠ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ರತ್ನಕುಮಾರ್, ಶಿರೂರು ಮಠ ಶೇ.30 ಮತ್ತು ಖಾಸಗಿ ಕಂಪನಿ ಶೇ.70ರ ಒಡಬಂಡಿಕೆಯಲ್ಲಿ ಕನಕ ಮಾಲ್ ನಿರ್ಮಾಣಕ್ಕೆ ಹಿಂದಿನ ಸ್ವಾಮೀಜಿ ನಿರ್ಧರಿಸಿದ್ದರು. ಇದಕ್ಕೆ ಕಾರ್ಪೊರೇಶನ್ ಬ್ಯಾಂಕ್ ಮಣಿಪಾಲ ಶಾಖೆಯಲ್ಲಿ 25 ಕೋಟಿ ರೂ.ಸಾಲ ಮಾಡಲಾಗಿದ್ದು, 15 ಕೋಟಿ ರೂ.ಪಡೆದು ಕಟ್ಟಡ ನಿರ್ಮಿಸಲಾಗಿದೆ. ಶೀಘ್ರದಲ್ಲೇ ಬ್ಯಾಂಕ್ ಸಿಎಂಡಿ ಅವರನ್ನು ಭೇಟಿ ಮಾಡಲಾಗುವುದು. ಜತೆಗೆ ಅಂಗಡಿ ಪಡೆಯಲು ಮುಂಗಡ ಪಾವತಿಸಿದ 10 ಜನರಿಗೂನ್ಯಾಯ ಒದಗಿಸಲು ಮಠ ಬದ್ಧವಾಗಿದೆ ಎಂದು ತಿಳಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…