Featured

ಶಿರೂರು ಮಠಕ್ಕೆ ಐಟಿ ನೋಟೀಸ್ -Vishwanews24

ಉಡುಪಿ,: ಶಿರೂರು ಮಠದ ಹಿಂದಿನ ಪೀಠಾಧಿಪತಿ ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಆದಯ ತೆರಿಗೆ ಇಲಾಖೆಯಿದ 17.34 ಕೋಟಿ ರೂ.ತೆರಿಗೆ ಮತ್ತು ಬಡ್ಡಿ ಪಾವತಿಸುವಂತೆ ನೋಟಿಸ್ ನೀಡಿದ್ದಾರೆ. ಅಲ್ಲದೆ ಮಠಕ್ಕೆ ಬರುತ್ತಿದ್ದ ವಾಣಿಜ್ಯ ಸಂಕೀರ್ಣದಿಂದ ಬರುತ್ತಿದ್ದ ಆದಾಯವನ್ನು ತೆರಿಗೆ ಇಲಾಖೆ ಮುಟ್ಟುಗೋಲು ಹಾಕಿದೆ ಎಂದು ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಭಾನುವಾರ ಶಿರೂರು ಮಠದಲ್ಲಿ ನಡೆದ ಶಿಷ್ಯ ವರ್ಗದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮನವರಿಕೆ ಮಾಡಿ ವಿನಂತಿಸಿದ ಬಳಿಕ ಬಳಿಕ ಶೇ.80ರಷ್ಟು ಮೊತ್ತಕ್ಕೆ ತಡೆ ಲಭಿಸಿದ್ದು, ಬಳಿಕ ಶೇ.20ರಷ್ಟು ಮೊತ್ತವನ್ನು ತುರ್ತಾಗಿ ಪಾವತಿಸಲು ಸೂಚಿಸಿದ್ದಾರೆ ಎಂದರು. .ಶಿರೂರು ಮಠ ಬೀಳುವ ಸ್ಥಿತಿಯಲ್ಲಿದ್ದು, ವಾಣಿಜ್ಯ ಸಂಕೀರ್ಣದಿಂದ ಬರುತ್ತಿದ್ದ ಆದಾಯದಿಂದ 25 ಲಕ್ಷ ಖರ್ಚು ಮಾಡಿ ಜೀರ್ಣೋದ್ದಾರ ಮಾಡಿದ್ದೇವೆ. ಮಠದ ಆದಾಯ ಕಡಿಮೆ ಇದೆ. ಮಠದ ಬ್ಯಾಂಕ್ ಖಾತೆಯಲ್ಲಿದ್ದ ೧೦ ಲಕ್ಷ ರೂಪಾಯಿಯನ್ನು ಬ್ಯಾಂಕ್ ನವರು ಮುಟ್ಟುಗೋಲು ಹಾಕಿದ್ದಾರೆ ಎಂದರು.

ಬಳಿಕ ಮಾತನಾಡಿದ ಸೋದೆ ಮಠ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ರತ್ನಕುಮಾರ್, ಶಿರೂರು ಮಠ ಶೇ.30 ಮತ್ತು ಖಾಸಗಿ ಕಂಪನಿ ಶೇ.70ರ ಒಡಬಂಡಿಕೆಯಲ್ಲಿ ಕನಕ ಮಾಲ್ ನಿರ್ಮಾಣಕ್ಕೆ ಹಿಂದಿನ ಸ್ವಾಮೀಜಿ ನಿರ್ಧರಿಸಿದ್ದರು. ಇದಕ್ಕೆ ಕಾರ್ಪೊರೇಶನ್ ಬ್ಯಾಂಕ್ ಮಣಿಪಾಲ ಶಾಖೆಯಲ್ಲಿ 25 ಕೋಟಿ ರೂ.ಸಾಲ ಮಾಡಲಾಗಿದ್ದು, 15 ಕೋಟಿ ರೂ.ಪಡೆದು ಕಟ್ಟಡ ನಿರ್ಮಿಸಲಾಗಿದೆ. ಶೀಘ್ರದಲ್ಲೇ ಬ್ಯಾಂಕ್ ಸಿಎಂಡಿ ಅವರನ್ನು ಭೇಟಿ ಮಾಡಲಾಗುವುದು. ಜತೆಗೆ ಅಂಗಡಿ ಪಡೆಯಲು ಮುಂಗಡ ಪಾವತಿಸಿದ 10 ಜನರಿಗೂನ್ಯಾಯ ಒದಗಿಸಲು ಮಠ ಬದ್ಧವಾಗಿದೆ ಎಂದು ತಿಳಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago