Featured

ಶಿರೂರು ಮಠದ 31ನೇಯ ನೂತನ ಉತ್ತರಾಧಿಕಾರಿಯಾಗಿ ಅನಿರುದ್ದ ನೇಮಕ -Vishwanews24

ಶಿರೂರು ಮಠದ 31ನೇಯ ನೂತನ ಉತ್ತರಾಧಿಕಾರಿಯಾಗಿ ಅನಿರುದ್ದ ನೇಮಕ -Vishwanews24

ಮೇ 11- 13ರ ವರೆಗೆ ಶಿರಸಿ ಬಳಿಯ ಸೋಂದಾದಲ್ಲಿ ಪಟ್ಟಾಭಿಷೇಕ ಕಾರ್ಯಕ್ರಮ

ಉಡುಪಿ: 16 ವರ್ಷ ವಯಸ್ಸಿನ ಅನಿರುದ್ದ ಎಂಬವರನ್ನು ಉಡುಪಿ ಅಷ್ಠ ಮಠಗಳಲ್ಲೊಂದಾದ ಶಿರೂರು ಮಠದ 31 ನೇಯ ಪೀಠಾಧಿಪತಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಸೋದೆ ಮಠದ ಸ್ವಾಮೀಜಿ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಹೇಳಿದರು.

ಅವರು ಮಂಗಳವಾರ ಹಿರಿಯಡ್ಕ ಬಳಿಯ ಶಿರೂರು ಮೂಲ ಮಠದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘‘ ಸನ್ಯಾಸ ದೀಕ್ಷೆ, ವೇದಾಂತ ಸಾಮ್ರಾಜ್ಯದ ಪಟ್ಟಾಭಿಷೇಕಕ್ಕೆ ಸಂಬಂಧಿಸಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಶಿರಸಿ ಬಳಿಯ ಸೋಂದಾದಲ್ಲಿ ಮೇ 11 ರಂದು ಆರಂಭಗೊಳ್ಳಲಿದ್ದು, ಮೇ14 ರಂದು ದೀಕ್ಷೆ, ಪಟ್ಟಾಭಿಷೇಕ ನಡೆಯಲಿದೆ,’’ ಎಂದು ತಿಳಿಸಿದರು.

ಮಹಾರಾಷ್ಟ್ರ : ಆಕ್ಸಿಜನ್ ಟ್ಯಾಂಕ್ ಸೋರಿಕೆ ; 22 ಕೊವಿಡ್ ರೋಗಿಗಳ ದುರ್ಮರಣ -Vishwanews24

ಮೂಲತಃ ಧರ್ಮಸ್ಥಳದ ಪ್ರಸ್ತುತ ಉಡುಪಿಯಲ್ಲಿ ವಾಸ್ತವ್ಯ ಹೊಂದಿರುವ ಉದಯ ಸರಳಾತ್ತಾಯ ಮತ್ತು ಶ್ರೀ ವಿದ್ಯಾ ದಂಪತಿಗಳ ಪುತ್ರರಾಗಿರುವ ಅನಿರುದ್ದ ತನ್ನ ಹತ್ತನೇ ತರಗತಿಯ ವಿದ್ಯಾಭ್ಯಾಸವನ್ನು ಪೊರೈಸಿದ್ದಾರೆ. ಅನಿರುದ್ದ್ ಕಿರಿಯ ವಯಸ್ಸಿನಿಂದಲೂ ದೇವರು ಹಾಗೂ ಧಾರ್ಮಿಕ ಚುಟುವಟಿಕೆಗಳಲ್ಲಿ ಆಸಕ್ತಿ ಉಳ್ಳವನಾಗಿದ್ದು ಮಠ ಸಂಪ್ರದಾಯಗಳ ಆಚರಣೆ ಹಾಗೂ ವಿಧಿ ವಿಧಾನಗಳ ಬಗ್ಗೆ ಪರಿಯವಿದ್ದು ವೇದಾಂತ ಶಾಸ್ತ್ರಗಳ ಸಾರವನ್ನು ಅರಿಯುವ ಮನಃ ಉಳ್ಳವನಾಗಿದ್ದು ತಾನೇ ಸ್ವತಃ ಶಿರೂರು ಮಠಕ್ಕೆ ಯತಿಯಾಗಿ ತೆರಳುವೆನೆಂದು ತನ್ನ ಅಭಿಪ್ರಾಯವನ್ನು ತನ್ನ ತಂದೆಯ ಬಳಿ ವ್ಯಕ್ತಪಡಿಸಿದ್ದಾನೆ. ಈ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಂಡು ಸರಳತ್ತಾಯರು ಆತನ ಜಾತಕವನ್ನು ವಿಮರ್ಸಿಸಿ ಪ್ರಶ್ನೆಗಳನ್ನು ಹಾಕಿ ಚಿಂತಿಸಿದಾಗ ಆತನಿಗೆ ಪೀಠಾಧಿಪತ್ಯ ಯೋಗವಿದೆ ಎಂದು ತಿಳಿಯಿತು ಎಂದು ತಿಳಿಸಿದರು.

ಈ ವಿಚಾರ ಕುರಿತು ತಾನು ವಟುವಿನ ಹಿನ್ನಲೆ, ಗುಣ, ಜ್ಞಾನ, ಆಸಕ್ತಿ ಹಾಗೂ ಜಾತಕಎಲ್ಲವನ್ನೂ ಪ್ರತ್ಯಕ್ಷ-ಪರೋಕ್ಷವಾಗಿ ಪರಿಶೀಲನೆ ಮಾಡಿದಾಗ ಎಲ್ಲಾ ಪರೀಕ್ಷೆಯಲ್ಲಿ ಅನಿರುದ್ದನು ಸಮಂಜಸವಾಗಿ ಕಂಡುಬಂದಿದ್ದು ಶೀರೂರು ಮಠದ ಪೀಠಾಧಿಪತಿಯಾಗಿ ಸನ್ಯಾಸ ದೀಕ್ಷೆ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಲಸಿಕೆ ತಂತ್ರವು ನೋಟ್‌ ಬ್ಯಾನ್‌ಗಿಂತ ಕಡಿಮೆಯೇನಿಲ್ಲ : ರಾಹುಲ್‌ ಗಾಂಧಿ -Vishwanews24

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

16 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

17 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago