Featured

ಶಿರೂರು: ಮೀನುಗಾರಿಕಾ ದೋಣಿ ದುರಂತ… ಇಬ್ಬರು ಮೀನುಗಾರರು ಮೃತ್ಯು – vishwanews24

ಶಿರೂರು: ಮೀನುಗಾರಿಕಾ ದೋಣಿ ದುರಂತ… ಇಬ್ಬರು ಮೀನುಗಾರರು ಮೃತ್ಯು

ಶಿರೂರು: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ.

ಹಡವಿನಕೋಣೆ ಶಿರೂರಿನ ನನ್ನು ಅಬ್ಸುಲ್ ಸತ್ತರ್ (45 ) ಹಾಗೂ ಕುದ್ವಾಯಿ ರೋಡ್, ಭಟ್ಕಳ ನಿವಾಸಿ ಮಿಸ್ಬಾ ಯೂಸುಫ್ (48) ಎನ್ನಲಾಗಿದೆ.

ಭಾನುವಾರ ರಾತ್ರಿ 10-00 ಗಂಟೆಗೆ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ IND KA 03 MO-4827 ದೋಣಿಯಲ್ಲಿ 3 ಜನ ಮೀನುಗಾರರಿದ್ದರು. ಸೋಮವಾರ ಮೀನುಗಾರಿಕೆ ನಡೆಸಿ ವಾಪಾಸ್ಸು ಬರುವಾಗ ಮುಂಜಾನೆ 1.30 ಗಂಟೆ ವೇಳೆಗೆ ಶಿರೂರು ಕಳುಹಿತ್ಲು ಅಳಿವೆ ಸಮೀಪ ಅರಬ್ಬೀ ಸಮುದ್ರದಲ್ಲಿ ದೋಣಿ ಮಗುಚಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ದೋಣಿಯಲ್ಲಿದ್ದ ಮತ್ತೋರ್ವ ಬುಡ್ಡು ಮುಖ್ತಾರ್ ಹಡವಿನಕೋಣೆ ಇವರನ್ನು ಇನ್ನೊಂದು ದೋಣಿಯಲ್ಲಿದ್ದ ಮಾಮ್ಸು ಯಾಕೂಬ್ ರವರು ರಕ್ಷಣೆ‌ ಮಾಡಿದ್ದಾರೆ.

ಈ ಭಾಗದಲ್ಲಿ ಕೆಲವೆ ತಿಂಗಳುಗಳ ಹಿಂದೆ ಇಬ್ಬರು ಮೀನುಗಾರರು ಸಮುದ್ರ ಪಾಲಾಗಿದ್ದು ಈ ವರ್ಷ ಬೈಂದೂರು ಭಾಗದಲ್ಲಿ ಅತ್ಯಧಿಕ ಮೀನುಗಾರಿಕಾ ದುರಂತಗಳು ನಡೆದಿದೆ.

ಕರಾವಳಿ ಕಾವಲು ಪಡೆ ಹಾಗೂ ಆರಕ್ಷಕ ಸಿಬಂಧಿಗಳು ಆಗಮಿಸಿದ್ದು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago